ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR…

ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR…

ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR…

ಮೈಸೂರು,ಡಿ24,Tv10 ಕನ್ನಡ

ಆಸ್ತಿ ವಿವಾದ ಹಿನ್ನಲೆ ಒಂಟಿಯಾಗಿದ್ದ ಮಹಿಳೆ ಮನೆಗೆ ನುಗ್ಗಿದ ಸಂಬಂಧಿಕರು ಗೂಂಡಾಗಳಂತೆ ವರ್ತಿಸಿ ಹಲ್ಲೆ ನಡೆಸಿ ವಸ್ತುಗಳನ್ನ ನಾಶಪಡಿಸಿ ಕೊಲೆ ಬೆದರಿಕೆ ಹಾಕಿದ ಪ್ರಕರಣ ಕುಂಬಾರಗೇರಿಯಲ್ಲಿ ನಡೆದಿದೆ.ನೇತ್ರಾವತಿ ಎಂಬುವರ ಮೇಲೆ ಹಲ್ಲೆ ನಡೆದಿದ್ದು ಪ್ರಸನ್ನ,ಜಗನ್ನಾಥ್,ಮಂಜುಳಾ,ರೇಣುಕಾ,ವರ್ಷಾ ಹಾಗೂ ಪ್ರಜ್ವಲ್ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಮಾ ಚಿತ್ರಮಂದಿರದ ರಸ್ತೆಯಲ್ಲಿ ನೇತ್ರಾವತಿ ರವರ ಮನೆ ಇದ್ದು ಕಳೆದ 10 ವರ್ಷಗಳಿಂದ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿದೆ.ಸದರಿ ಆಸ್ತಿಯನ್ನ ಮಾರಾಟ ಮಾಡಲು ನೇತ್ರಾವತಿ ರವರ ಸಂಬಂಧಿಕರೇ ಆದ ಆರೋಪಿಗಳು ಸಾಕಷ್ಟು ವಿಫಲ ಯತ್ನ ನಡೆಸಿದ್ದಾರೆ.ಕೆಲವು ದಿನಗಳ ಹಿಂದೆ 6 ಜನ ಆರೋಪಿಗಳು 7-8 ಜನರನ್ನ ಮನೆಗೆ ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ.ನಿಮ್ಮಿಂದ ಮನೆ ಮಾರಾಟ ಮಾಡಲು ಸಾಧ್ಯವಾಗಿಲ್ಲ ಎಂದು ಕಾರಣ ನೀಡಿ ಗಂಡ ಇಲ್ಲದಿರುವ ಸಮಯದಲ್ಲಿ ಮನೆಗೆ ಪ್ರವೇಶಿಸಿ ನೇತ್ರಾವತಿ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.ಗಲಾಟೆ ವೇಳೆ ನೇತ್ರಾವತಿ ರವರ ಮಾಂಗಲ್ಯ ಸರ ಹಾಗೂ ಎರಡು ಉಂಗುರಗಳನ್ನ ಕಿತ್ತುಕೊಂಡು ಹೋಗಿದ್ದಾರೆ.ಮೊಬೈಲ್ ಹೊಡೆದುಹಾಕಿ ಗೂಂಡಾಗಳಂತೆ ವರ್ತಿಸಿದ್ದಾರೆ.ಮನೆಯಲ್ಲಿದ್ದ ಸಿಸಿ ಕ್ಯಾಮರಾ ಧ್ವಂಸ ಮಾಡಿದ್ದಾರೆ.ಕೆಲವು ವಸ್ತುಗಳನ್ನ ನಾಶಪಡಿಸಿದ್ದಾರೆ.ಹಲ್ಲೆಗೆ ಒಳಗಾದ ನೇತ್ರಾವತಿ 6 ಮಂದಿ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…

Leave a Reply

Your email address will not be published. Required fields are marked *