ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR…

ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR…

ಆಸ್ತಿ ವಿವಾದ..ಒಂಟಿ ಇದ್ದ ಮಹಿಳೆ ಮೇಲೆ ಹಲ್ಲೆ…ಗೂಂಡಾಗಳಂತೆ ವರ್ತಿಸಿದ ಸಂಬಂಧಿಕರು…ಕೊಲೆ ಬೆದರಿಕೆ…6 ಮಂದಿ ವಿರುದ್ದ FIR…

ಮೈಸೂರು,ಡಿ24,Tv10 ಕನ್ನಡ

ಆಸ್ತಿ ವಿವಾದ ಹಿನ್ನಲೆ ಒಂಟಿಯಾಗಿದ್ದ ಮಹಿಳೆ ಮನೆಗೆ ನುಗ್ಗಿದ ಸಂಬಂಧಿಕರು ಗೂಂಡಾಗಳಂತೆ ವರ್ತಿಸಿ ಹಲ್ಲೆ ನಡೆಸಿ ವಸ್ತುಗಳನ್ನ ನಾಶಪಡಿಸಿ ಕೊಲೆ ಬೆದರಿಕೆ ಹಾಕಿದ ಪ್ರಕರಣ ಕುಂಬಾರಗೇರಿಯಲ್ಲಿ ನಡೆದಿದೆ.ನೇತ್ರಾವತಿ ಎಂಬುವರ ಮೇಲೆ ಹಲ್ಲೆ ನಡೆದಿದ್ದು ಪ್ರಸನ್ನ,ಜಗನ್ನಾಥ್,ಮಂಜುಳಾ,ರೇಣುಕಾ,ವರ್ಷಾ ಹಾಗೂ ಪ್ರಜ್ವಲ್ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಮಾ ಚಿತ್ರಮಂದಿರದ ರಸ್ತೆಯಲ್ಲಿ ನೇತ್ರಾವತಿ ರವರ ಮನೆ ಇದ್ದು ಕಳೆದ 10 ವರ್ಷಗಳಿಂದ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿದೆ.ಸದರಿ ಆಸ್ತಿಯನ್ನ ಮಾರಾಟ ಮಾಡಲು ನೇತ್ರಾವತಿ ರವರ ಸಂಬಂಧಿಕರೇ ಆದ ಆರೋಪಿಗಳು ಸಾಕಷ್ಟು ವಿಫಲ ಯತ್ನ ನಡೆಸಿದ್ದಾರೆ.ಕೆಲವು ದಿನಗಳ ಹಿಂದೆ 6 ಜನ ಆರೋಪಿಗಳು 7-8 ಜನರನ್ನ ಮನೆಗೆ ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ.ನಿಮ್ಮಿಂದ ಮನೆ ಮಾರಾಟ ಮಾಡಲು ಸಾಧ್ಯವಾಗಿಲ್ಲ ಎಂದು ಕಾರಣ ನೀಡಿ ಗಂಡ ಇಲ್ಲದಿರುವ ಸಮಯದಲ್ಲಿ ಮನೆಗೆ ಪ್ರವೇಶಿಸಿ ನೇತ್ರಾವತಿ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.ಗಲಾಟೆ ವೇಳೆ ನೇತ್ರಾವತಿ ರವರ ಮಾಂಗಲ್ಯ ಸರ ಹಾಗೂ ಎರಡು ಉಂಗುರಗಳನ್ನ ಕಿತ್ತುಕೊಂಡು ಹೋಗಿದ್ದಾರೆ.ಮೊಬೈಲ್ ಹೊಡೆದುಹಾಕಿ ಗೂಂಡಾಗಳಂತೆ ವರ್ತಿಸಿದ್ದಾರೆ.ಮನೆಯಲ್ಲಿದ್ದ ಸಿಸಿ ಕ್ಯಾಮರಾ ಧ್ವಂಸ ಮಾಡಿದ್ದಾರೆ.ಕೆಲವು ವಸ್ತುಗಳನ್ನ ನಾಶಪಡಿಸಿದ್ದಾರೆ.ಹಲ್ಲೆಗೆ ಒಳಗಾದ ನೇತ್ರಾವತಿ 6 ಮಂದಿ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *