ಮಾರ್ಟಳ್ಳಿಯಳ್ಳಿ ಸಡಗರ ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ

ಮಾರ್ಟಳ್ಳಿಯಳ್ಳಿ ಸಡಗರ ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ

ಮಾರ್ಟಳ್ಳಿಯಳ್ಳಿ ಸಡಗರ ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ

ಹನೂರು Tv10 ಕನ್ನಡ
25/12/2025

ಹನೂರು: ತಾಲೂಕಿನ ಮಾರ್ಟಳ್ಳಿ ಸಂತ ಲೂರ್ದು ಮಾತೆ ಚರ್ಚ್ ನಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಕ್ರಿಸ್‌ಮಸ್‌ ಹಬ್ಬ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ತಾಲೂಕಿನಲ್ಲಿ ಅತಿ ಹೆಚ್ಚು ಕ್ರೈಸ್ತರು ಇರುವ ಮಾರ್ಟಳ್ಳಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಪವಿತ್ರ ಹಬ್ಬ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದ್ದು, ವಿವಿಧ ಚರ್ಚ್‌ಗಳಲ್ಲಿ ಬುಧವಾರ ರಾತ್ರಿಯಿಂದಲೇ ಕ್ರಿಸ್ಮಸ್ ಆಚರಣೆ ನಡೆಯಿತು.

ಕ್ರಿಸ್ಟಸ್ ಹಿನ್ನೆಲೆಯಲ್ಲಿ ಮಾರ್ಟಳ್ಳಿ ಸಂತ ಲೂರ್ದು ಮಾತೆ ಚರ್ಚ್‌ನಲ್ಲಿ ಬುಧವಾರ ರಾತ್ರಿ 11ಕ್ಕೆ ಹಾಡುಗಳೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ 11.30 ರಿಂದ ಜಾಗರಣೆ ಕ್ರಿಸ್ಮಸ್ ಬಲಿಪೂಜೆ ನಡೆಯಿತು. ರಾತ್ರಿ 12 ಗಂಟೆಗೆ ಬಾಲ ಯೇಸುವಿನ ಮೆರವಣಿಗೆ ಮೂಲಕ ಗೋದಲಿಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಮಾರ್ಟಳ್ಳಿ ವಲಯದ ಶ್ರೇಷ್ಠ ಗುರುಗಳು ಹಾಗೂ ಮಾರ್ಟಳ್ಳಿ ಧರ್ಮ ಕೇಂದ್ರದ ಗುರುಗಳಾದ ಫಾ. ಡಾ. ಎಂ. ವಿನ್ಸೆಂಟ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು. ಆದಾದ ನಂತರ ಎಲ್ಲರಿಗೂ ಕೇಕ್ ಮತ್ತು ಬಾದಾಮಿ ಹಾಲು ಹಂಚಿ ಹಬ್ಬದ ಶುಭಾಶಯಗಳ ವಿನಿಮಯ ನಡೆಯಿತು.

ಕ್ರಿಸ್‌ಮಸ್‌ ಹಬ್ಬದ ಹಿನ್ನೆಲೆ ಮಾರ್ಟಳ್ಳಿ ಸುತ್ತಮುತ್ತಲಿನ ಚರ್ಚ್‌ಗಳೆಲ್ಲವೂ ಸಿಂಗಾರಗೊಂಡಿದ್ದು, ಬುಧವಾರ ರಾತ್ರಿಯಿಂದಲೇ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಕ್ರಿಸ್‌ಮಸ್‌ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದ ಚರ್ಚ್‌ಗಳೆಲ್ಲವೂ ಕಳೆದೊಂದು ವಾರದಿಂದಲೇ ಸಿಂಗಾರಗೊಂಡಿದ್ದವು, ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು, ಚರ್ಚ್ ಗಳಲ್ಲಿ ಏಸು ಕ್ರಿಸ್ತ ಜನಿಸಿದ ಗೋದಲಿ ನಿರ್ಮಿಸಲಾಗಿತ್ತು, ಜತೆಗೆ ಕ್ರಿಸ್‌ಮಸ್‌ ಟ್ರೀ ಇಟ್ಟು ಎಲ್ಲೆಡೆ ನಕ್ಷತ್ರದ ಪ್ರತಿಕೃತಿ ಯನ್ನು ಕಟ್ಟಿ ಹಬ್ಬದ ಮೆರುಗನ್ನು ಹೆಚ್ಚಿಸಲಾಗಿರುವುದು ಕಂಡು ಬಂದಿತು.

ವರದಿ :ವಿಜಯ್ ಕುಮಾರ್. ಕಾಂಚಳ್ಳಿ /ಹನೂರು.

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *