ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

  • Crime
  • December 30, 2025
  • No Comment
  • 83

ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

ನಂಜನಗೂಡು,ಡಿ30,Tv10 ಕನ್ನಡ

ಬೈಕ್ ಸಮೇತ ಯುವಕ ಸಜೀವ ದಹನವಾದ ಪ್ರಕರಣ ನಂಜನಗೂಡು ಪೊಲೀಸರ ನಿದ್ದೆ ಕೆಡಿಸಿದೆ.ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳು ಉದ್ಭವಿಸಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ನಿನ್ನೆ ಸಂಜೆ ವೇಳೆ ನಂಜನಗೂಡಿನಿಂದ ಕೊರಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ ಪಕ್ಕದಲ್ಲಿ ಬೈಕ್ ನಿಂದ ಯುವಕ ಬೆಂಕಿ ಜ್ವಾಲೆಗಳ ಮಧ್ಯೆ ಓಡಿ ಬಂದು ಬಿದ್ದಿದ್ದಾನೆ.ಕೆಲವೇ ಕ್ಷಣಗಳಲ್ಲಿ ಯುವಕನ ದೇಹ ಸುಟ್ಟುಹೋಗಿದೆ.ಬೈಕ್ ಸಹ ಸುಟ್ಟು ಕರುಕಲಾಗಿದೆ.ಇದನ್ನ ಗಮನಿಸಿದ ಸ್ಥಳೀಯರು ನೆರವಿಗೆ ಧಾವಿಸಿದರಾದ್ರೂ ಯುವಕನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ.ರಾಂಪುರ ನಿವಾಸಿ ಆದಿತ್ಯ(24). ಮೃತಪಟ್ಟ ಯುವಕ.ಈತನ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಬೈಕ್ ಗೆ ಬೆಂಕಿ ಹತ್ತಿಕೊಂಡರೆ ಓಡಿ ತಪ್ಪಿಸಿಕೊಳ್ಳಬಹುದಿತ್ತು…ಆದ್ರೆ ಬೈಕ್ ಸಮೇತ ಯುವಕ ಸಹ ಸುಟ್ಟು ಹೋಗಿರುವುದು ಸಹಜವಲ್ಲ ಎಂಬುದು ಕುಟುಂಬಸ್ಥರು ಆರೋಪ.ನಿರ್ಜನ ಪ್ರದೇಶಕ್ಕೆ ಏಕಾಂಗಿಯಾಗಿ ಹೋಗುವ ಬಗ್ಗೆ ಅನುಮಾನವಿದೆ. ಬಂದಿದ್ದಾರೆ.ಯಾರೋ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಶಂಕಿಸಿದ್ದಾರೆ.

ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ನಂಜನಗೂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಮೇಲ್ನೋಟಕ್ಕೆ ಆದಿತ್ಯ ಸಾವು ಕೊಲೆ ಇರಬಹುದೆಂದೇ ಶಂಕಿಸಲಾಗಿದೆ.ಕೂಡಲೇ ಕುಟುಂಬಸ್ಥರ ಮನವಿಗೆ ಪೊಲೀಸರು ಸ್ಪಂದಿಸಬೇಕಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *