ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

  • Crime
  • December 30, 2025
  • No Comment
  • 99

ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

ನಂಜನಗೂಡು,ಡಿ30,Tv10 ಕನ್ನಡ

ಬೈಕ್ ಸಮೇತ ಯುವಕ ಸಜೀವ ದಹನವಾದ ಪ್ರಕರಣ ನಂಜನಗೂಡು ಪೊಲೀಸರ ನಿದ್ದೆ ಕೆಡಿಸಿದೆ.ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳು ಉದ್ಭವಿಸಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ನಿನ್ನೆ ಸಂಜೆ ವೇಳೆ ನಂಜನಗೂಡಿನಿಂದ ಕೊರಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ ಪಕ್ಕದಲ್ಲಿ ಬೈಕ್ ನಿಂದ ಯುವಕ ಬೆಂಕಿ ಜ್ವಾಲೆಗಳ ಮಧ್ಯೆ ಓಡಿ ಬಂದು ಬಿದ್ದಿದ್ದಾನೆ.ಕೆಲವೇ ಕ್ಷಣಗಳಲ್ಲಿ ಯುವಕನ ದೇಹ ಸುಟ್ಟುಹೋಗಿದೆ.ಬೈಕ್ ಸಹ ಸುಟ್ಟು ಕರುಕಲಾಗಿದೆ.ಇದನ್ನ ಗಮನಿಸಿದ ಸ್ಥಳೀಯರು ನೆರವಿಗೆ ಧಾವಿಸಿದರಾದ್ರೂ ಯುವಕನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ.ರಾಂಪುರ ನಿವಾಸಿ ಆದಿತ್ಯ(24). ಮೃತಪಟ್ಟ ಯುವಕ.ಈತನ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಬೈಕ್ ಗೆ ಬೆಂಕಿ ಹತ್ತಿಕೊಂಡರೆ ಓಡಿ ತಪ್ಪಿಸಿಕೊಳ್ಳಬಹುದಿತ್ತು…ಆದ್ರೆ ಬೈಕ್ ಸಮೇತ ಯುವಕ ಸಹ ಸುಟ್ಟು ಹೋಗಿರುವುದು ಸಹಜವಲ್ಲ ಎಂಬುದು ಕುಟುಂಬಸ್ಥರು ಆರೋಪ.ನಿರ್ಜನ ಪ್ರದೇಶಕ್ಕೆ ಏಕಾಂಗಿಯಾಗಿ ಹೋಗುವ ಬಗ್ಗೆ ಅನುಮಾನವಿದೆ. ಬಂದಿದ್ದಾರೆ.ಯಾರೋ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಶಂಕಿಸಿದ್ದಾರೆ.

ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ನಂಜನಗೂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಮೇಲ್ನೋಟಕ್ಕೆ ಆದಿತ್ಯ ಸಾವು ಕೊಲೆ ಇರಬಹುದೆಂದೇ ಶಂಕಿಸಲಾಗಿದೆ.ಕೂಡಲೇ ಕುಟುಂಬಸ್ಥರ ಮನವಿಗೆ ಪೊಲೀಸರು ಸ್ಪಂದಿಸಬೇಕಿದೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *