MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

ಮೈಸೂರು,ಡಿ30,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ನೂತನ ಬಡಾವಣೆ ನಿರ್ಮಾಣಕ್ಕೆ ಪ್ರಕ್ರಿಯೆ ಆರಂಭವಾಗಿದೆ.ನೂತನ ಬಡಾವಣೆಗಾಗಿ ಜಮೀನುಗಳನ್ನ ಗುರುತಿಸಲಾಗಿದ್ದು ಶೇ 50-50 ಅನುಪಾತದಲ್ಲಿ ರಚಿಸಲು ಪ್ರಾಧಿಕಾರ ಸಜ್ಜಾಗುತ್ತಿದೆ.ಗುರುತಿಸಲಾದ ಜಮೀನು ಮಾಲೀಕರ ಒಪ್ಪಿಗೆ ಪಡೆಯಲು ಆಯುಕ್ತ ಕೆ.ಆರ್.ರಕ್ಷಿತ್ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.ಮೈಸೂರು ತಾಲೂಕು ಇಲವಾಲ ಹೋಬಳಿಯ ನಾಗವಾಲ ಗ್ರಾಮ,ಬೊಮ್ಮೇನಹಳ್ಳಿ ಗ್ರಾಮ,ಕಮರವಳ್ಳಿ ಗ್ರಾಮ ಹಾಗೂ ದೊಡ್ಡಮಾರಗೌಡನಹಳ್ಳಿ ಗ್ರಾಮದ ಜಮೀನುಗಳನ್ನ ಗುರುತಿಸಲಾಗಿದೆ.ಶೇ 50-50 ಅನುಪಾತದಲ್ಲಿ ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು ಭೂ ಮಾಲೀಕರ ಒಪ್ಪಿಗೆಗಾಗಿ ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.ರಸ್ತೆ,ಪಾರ್ಕ್,ಸಿಎ ನಿವೇಶನ ಕಳೆದು ಉಳಿದ ಜಾಗದಲ್ಲಿ ನಿವೇಶನಗಳನ್ನ ಅಭಿವೃದ್ದಿ ಪಡಿಸಿ ಶೇ 50 ರಷ್ಟು ಭೂ ಮಾಲೀಕರಿಗೆ ಹಿಂದಿರುಗಿಸಲಾಗುವ ಯೋಜನೆ ಇದಾಗಿದೆ.ಇದರಲ್ಲಿ ಭೂ ಮಾಲೀಕರು ಯಾವುದೇ ವೆಚ್ಚ ಭರಿಸುವಂತಿಲ್ಲ.ಡಾಂಬರ್ ರಸ್ತೆ,ವಿದ್ಯುತ್ ಸಂಪರ್ಕ,ಚರಂಡಿ,ಉದ್ಯಾನವನ,ಯುಜಿಡಿ,ನೀರು ಸರಬರಾಜು ವ್ಯವಸ್ಥೆ ಒಳಗೊಂಡಂತೆ ಸಂಪೂರ್ಣ ಅಭಿವೃದ್ದಿಪಡಿಸುವ ಜವಾಬ್ದಾರಿ ಪ್ರಾಧಿಕಾರದ್ದೇ ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಭೂ ಮಾಲೀಕರು ಒಪ್ಪಿಗೆ ನೀಡಲು ಪ್ರಾಧಿಕಾರಕ್ಕೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಗುರುತಿಸಲಾದ ಜಮೀನುಗಳ ಸರ್ವೆ ನಂ ಗಳನ್ನೂ ಸಹ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *