MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

ಮೈಸೂರು,ಡಿ30,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ನೂತನ ಬಡಾವಣೆ ನಿರ್ಮಾಣಕ್ಕೆ ಪ್ರಕ್ರಿಯೆ ಆರಂಭವಾಗಿದೆ.ನೂತನ ಬಡಾವಣೆಗಾಗಿ ಜಮೀನುಗಳನ್ನ ಗುರುತಿಸಲಾಗಿದ್ದು ಶೇ 50-50 ಅನುಪಾತದಲ್ಲಿ ರಚಿಸಲು ಪ್ರಾಧಿಕಾರ ಸಜ್ಜಾಗುತ್ತಿದೆ.ಗುರುತಿಸಲಾದ ಜಮೀನು ಮಾಲೀಕರ ಒಪ್ಪಿಗೆ ಪಡೆಯಲು ಆಯುಕ್ತ ಕೆ.ಆರ್.ರಕ್ಷಿತ್ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.ಮೈಸೂರು ತಾಲೂಕು ಇಲವಾಲ ಹೋಬಳಿಯ ನಾಗವಾಲ ಗ್ರಾಮ,ಬೊಮ್ಮೇನಹಳ್ಳಿ ಗ್ರಾಮ,ಕಮರವಳ್ಳಿ ಗ್ರಾಮ ಹಾಗೂ ದೊಡ್ಡಮಾರಗೌಡನಹಳ್ಳಿ ಗ್ರಾಮದ ಜಮೀನುಗಳನ್ನ ಗುರುತಿಸಲಾಗಿದೆ.ಶೇ 50-50 ಅನುಪಾತದಲ್ಲಿ ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು ಭೂ ಮಾಲೀಕರ ಒಪ್ಪಿಗೆಗಾಗಿ ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.ರಸ್ತೆ,ಪಾರ್ಕ್,ಸಿಎ ನಿವೇಶನ ಕಳೆದು ಉಳಿದ ಜಾಗದಲ್ಲಿ ನಿವೇಶನಗಳನ್ನ ಅಭಿವೃದ್ದಿ ಪಡಿಸಿ ಶೇ 50 ರಷ್ಟು ಭೂ ಮಾಲೀಕರಿಗೆ ಹಿಂದಿರುಗಿಸಲಾಗುವ ಯೋಜನೆ ಇದಾಗಿದೆ.ಇದರಲ್ಲಿ ಭೂ ಮಾಲೀಕರು ಯಾವುದೇ ವೆಚ್ಚ ಭರಿಸುವಂತಿಲ್ಲ.ಡಾಂಬರ್ ರಸ್ತೆ,ವಿದ್ಯುತ್ ಸಂಪರ್ಕ,ಚರಂಡಿ,ಉದ್ಯಾನವನ,ಯುಜಿಡಿ,ನೀರು ಸರಬರಾಜು ವ್ಯವಸ್ಥೆ ಒಳಗೊಂಡಂತೆ ಸಂಪೂರ್ಣ ಅಭಿವೃದ್ದಿಪಡಿಸುವ ಜವಾಬ್ದಾರಿ ಪ್ರಾಧಿಕಾರದ್ದೇ ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಭೂ ಮಾಲೀಕರು ಒಪ್ಪಿಗೆ ನೀಡಲು ಪ್ರಾಧಿಕಾರಕ್ಕೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಗುರುತಿಸಲಾದ ಜಮೀನುಗಳ ಸರ್ವೆ ನಂ ಗಳನ್ನೂ ಸಹ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ…

Spread the love

Related post

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ…
MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ…
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್…

Leave a Reply

Your email address will not be published. Required fields are marked *