MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

ಮೈಸೂರು,ಡಿ30,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ನೂತನ ಬಡಾವಣೆ ನಿರ್ಮಾಣಕ್ಕೆ ಪ್ರಕ್ರಿಯೆ ಆರಂಭವಾಗಿದೆ.ನೂತನ ಬಡಾವಣೆಗಾಗಿ ಜಮೀನುಗಳನ್ನ ಗುರುತಿಸಲಾಗಿದ್ದು ಶೇ 50-50 ಅನುಪಾತದಲ್ಲಿ ರಚಿಸಲು ಪ್ರಾಧಿಕಾರ ಸಜ್ಜಾಗುತ್ತಿದೆ.ಗುರುತಿಸಲಾದ ಜಮೀನು ಮಾಲೀಕರ ಒಪ್ಪಿಗೆ ಪಡೆಯಲು ಆಯುಕ್ತ ಕೆ.ಆರ್.ರಕ್ಷಿತ್ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.ಮೈಸೂರು ತಾಲೂಕು ಇಲವಾಲ ಹೋಬಳಿಯ ನಾಗವಾಲ ಗ್ರಾಮ,ಬೊಮ್ಮೇನಹಳ್ಳಿ ಗ್ರಾಮ,ಕಮರವಳ್ಳಿ ಗ್ರಾಮ ಹಾಗೂ ದೊಡ್ಡಮಾರಗೌಡನಹಳ್ಳಿ ಗ್ರಾಮದ ಜಮೀನುಗಳನ್ನ ಗುರುತಿಸಲಾಗಿದೆ.ಶೇ 50-50 ಅನುಪಾತದಲ್ಲಿ ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು ಭೂ ಮಾಲೀಕರ ಒಪ್ಪಿಗೆಗಾಗಿ ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.ರಸ್ತೆ,ಪಾರ್ಕ್,ಸಿಎ ನಿವೇಶನ ಕಳೆದು ಉಳಿದ ಜಾಗದಲ್ಲಿ ನಿವೇಶನಗಳನ್ನ ಅಭಿವೃದ್ದಿ ಪಡಿಸಿ ಶೇ 50 ರಷ್ಟು ಭೂ ಮಾಲೀಕರಿಗೆ ಹಿಂದಿರುಗಿಸಲಾಗುವ ಯೋಜನೆ ಇದಾಗಿದೆ.ಇದರಲ್ಲಿ ಭೂ ಮಾಲೀಕರು ಯಾವುದೇ ವೆಚ್ಚ ಭರಿಸುವಂತಿಲ್ಲ.ಡಾಂಬರ್ ರಸ್ತೆ,ವಿದ್ಯುತ್ ಸಂಪರ್ಕ,ಚರಂಡಿ,ಉದ್ಯಾನವನ,ಯುಜಿಡಿ,ನೀರು ಸರಬರಾಜು ವ್ಯವಸ್ಥೆ ಒಳಗೊಂಡಂತೆ ಸಂಪೂರ್ಣ ಅಭಿವೃದ್ದಿಪಡಿಸುವ ಜವಾಬ್ದಾರಿ ಪ್ರಾಧಿಕಾರದ್ದೇ ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಭೂ ಮಾಲೀಕರು ಒಪ್ಪಿಗೆ ನೀಡಲು ಪ್ರಾಧಿಕಾರಕ್ಕೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಗುರುತಿಸಲಾದ ಜಮೀನುಗಳ ಸರ್ವೆ ನಂ ಗಳನ್ನೂ ಸಹ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *