ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR…Cr no 381/25

ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR…Cr no 381/25

ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಂಕಿ…ಕೊಲೆ ಬೆದರಿಕೆ…ಅವಾಚ್ಯ ಶಬ್ದಗಳಿಂದ ನಿಂದನೆ…ಕರ್ತವ್ಯಕ್ಕೆ ಅಡ್ಡಿ…ಶಿಡ್ಲಘಟ್ಟ ಪ್ರಕರಣ ನೆನಪಿಸುವ ಘಟನೆ…ವ್ಯಕ್ತಿ ವಿರುದ್ದ FIR…

ಮೈಸೂರು,ಜ17,Tv10 ಕನ್ನಡ

ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆ ಮಾಡಲು ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಕಿಗೆ ಬಂದಿದೆ.ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ದ ಮಹಿಳಾ ಅಧಿಕಾರಿ ರಕ್ಷಣೆ ಕೋರಿ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಗ್ರಾಮ ಆಡಳಿತಾಧಿಕಾರಿ ಬಂಡೀಪಾಳ್ಯ ವೃತ್ತದ ಜಿ ಭವ್ಯ ಹಾಗೂ ಗ್ರಾಮ ಸಹಾಯಕ ನವೀನ್ ಕುಮಾರ್ ಎಂಬುವರ ಮೇಲೆ ವರುಣಾ ಹೋಬಳಿ ಗುಡಮಾದನಹಳ್ಳಿ ಗ್ರಾಮದ ನಿವಾಸಿ ಜಿಎಂ ಪುಟ್ಟಸ್ವಾಮಿ ಎಂಬುವರು ಬೆದರಿಕೆ ಹಾಕಿದ್ದಾರೆ.ಧಂಕಿ ಹಾಕಿ ಕೊಲೆ ಬೆದರಿಕೆ ಹಾಕಿದ ದೃಶ್ಯಗಳನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಲಾಗಿದೆ.ಈ ವೇಳೆ ಪುಟ್ಟಸ್ವಾಮಿ ಬಲವಂತವಾಗಿ ಮೊಬೈಲ್ ಕಿತ್ತುಕೊಂಡು ವಿಡಿಯೋಗಳನ್ನ ಡಿಲೀಟ್ ಮಾಡಿದ್ದಾರೆ.

ವರುಣಾ ಹೋಬಳಿಯ ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ ಮಾದರಿಯ ಆಸ್ಪತ್ರೆ ನಿರ್ಮಿಸಲು ಸರ್ವೆ ನಂ.8 ರಲ್ಲಿ 5 ಎಕ್ರೆ 05 ಗುಂಟೆ,ಸರ್ವೆ ನಂ.60 ರಲ್ಲಿ 6 ಎಕ್ರೆ 10 ಗುಂಟೆ ಹಾಗೂ ಸರ್ವೆ ನಂ.68 ರಲ್ಲಿ 8 ಎಕ್ರೆ 25 ಗುಂಟೆ ಒಟ್ಟು 20 ಎಕ್ರೆ ಜಾಗ ಮೀಸಲಿಡಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಕನಸಿನ ಯೋಜನೆ ಇದಾಗಿದೆ.ತಮ್ಮ ಸ್ವಕ್ಷೇತ್ರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಆಸಕ್ತಿ ತೋರಿದ ಹಿನ್ನಲೆ ಜಾಗ ಗುರುತಿಸಿ ಸ್ವಾಧೀನ ಪ್ರಕ್ರಿಯೆ ಆರಂಭಿಸುವಂತೆ ಆದೇಶವಾಗಿದೆ.ಈ ಹಿನ್ನಲೆ ಗುಡಮಾದನಹಳ್ಳಿಯಲ್ಲಿ ಗುರುತಿಸಲಾದ ಜಮೀನು ಪರಿಶೀಲನೆಗೆ ಮಹಿಳಾ ಅಧಿಕಾರಿ ಜಿ ಭವ್ಯ ಹಾಗೂ ನವೀನ್ ಕುಮಾರ್ ತೆರಳಿದ್ದರು.ಈ ವೇಳೆ ಸದರಿ ಜಮೀನಿನಲ್ಲಿ ಅನಧಿಕೃತವಾಗಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದ ಪುಟ್ಟಸ್ವಾಮಿ ಧಿಢೀರ್ ಪ್ರತ್ಯಕ್ಷವಾಗಿ ಯಾರನ್ನ ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ..? ಮೊದಲು ತಹಸೀಲ್ದಾರ್ ತಲೆ ತೆಗೆಯಬೇಕು..ನಿನ್ನನ್ನ ಇಲ್ಲಿಯೇ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.ಪುಟ್ಟಸ್ವಾಮಿಯ ದೌರ್ಜನ್ಯ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಗ್ರಾಮ ಸಹಾಯಕ ನವೀನ್ ಕುಮಾರ್ ಗೂ ಕೊಲೆ ಬೆದರಿಕೆ ಹಾಕಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿಸಿದ್ದಾನೆ.

ಸರ್ಕಾರಿ ಕೆಲಸವನ್ನ ನಿರ್ಭಯವಾಗಿ ನಿರ್ವಹಿಸಲು ಮಹಿಳಾ ಸಿಬ್ಬಂದಿಯಾದ ನನಗೆ ಭಯದ ವಾತಾವರಣ ಉಂಟು ಮಾಡಿರುವ ಪುಟ್ಟಸ್ವಾಮಿ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಭವ್ಯ ರವರು ಪ್ರಕರಣ ದಾಖಲಿಸಿ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೆ ಶಿಡ್ಲಘಟ್ಟದಲ್ಲಿ ಮಹಿಳಾ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಧಂಕಿ ಹಾಕಿ ಬೆದರಿಸಿದ ಘಟನೆ ಮಾಸುವ ಮುನ್ನವೇ ಸಿಎಂ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿ ವಿರುದ್ದ ಕೊಲೆ ಬೆದರಿಕೆ ಬಂದಿದೆ.ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸುವ ವ್ಯಕ್ತಿಗಳಿಂದ ಅಧಿಕಾರಿಗಳಿಗೆ ರಕ್ಷಣೆ ಬೇಕಿದೆ.ಸಿಎಂ ಪ್ರತಿನಿಧಿಸುವ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದರೆ ಉಳಿದ ಕ್ಷೇತ್ರಗಳ ಗತಿ ಏನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *