ಸಿಎ ನಿವೇಶನದಲ್ಲಿ ಅನಧಿಕೃತ ಶಾಲಾ ಕಟ್ಟಡ ನಿರ್ಮಾಣ…ಮೈಸೂರು ಅಭಿವೃಧ್ದಿ ಪ್ರಾಧಿಕಾರದಿಂದ ತೆರುವು…ಲಕ್ಷಾಂತರ ಮೌಲ್ಯದ ಸಿಎ ನಿವೇಶನ ವಶಕ್ಕೆ…

ಸಿಎ ನಿವೇಶನದಲ್ಲಿ ಅನಧಿಕೃತ ಶಾಲಾ ಕಟ್ಟಡ ನಿರ್ಮಾಣ…ಮೈಸೂರು ಅಭಿವೃಧ್ದಿ ಪ್ರಾಧಿಕಾರದಿಂದ ತೆರುವು…ಲಕ್ಷಾಂತರ ಮೌಲ್ಯದ ಸಿಎ ನಿವೇಶನ ವಶಕ್ಕೆ…

ಸಿಎ ನಿವೇಶನದಲ್ಲಿ ಅನಧಿಕೃತ ಶಾಲಾ ಕಟ್ಟಡ ನಿರ್ಮಾಣ…ಮೈಸೂರು ಅಭಿವೃಧ್ದಿ ಪ್ರಾಧಿಕಾರದಿಂದ ತೆರುವು…ಲಕ್ಷಾಂತರ ಮೌಲ್ಯದ ಸಿಎ ನಿವೇಶನ ವಶಕ್ಕೆ…

ಮೈಸೂರು,ಜ28,Tv10 ಕನ್ನಡ

ಸಿಎ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಶಾಲಾ ಕಟ್ಟಡವನ್ನ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು ತೆರವುಗೊಳಿಸಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಅನಧಿಕೃತ ಕಟ್ಟಡವನ್ನ ನೆಲಸಮಗೊಳಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ.ಮೈಸೂರು ತಾಲೂಕು ವರುಣಾ ಹೋಬಳಿ ವಾಜಮಂಗಲ ಗ್ರಾಮದ ಸರ್ವೆ ನಂ.30 ರ 0-06 ಗುಂಟೆ,0/2 ರ 0-31 ಗುಂಟೆ ಮತ್ತು 30/6 ರ 0-37 ಗುಂಟೆ ಒಟ್ಟು 1 ಎಕ್ರೆ 34 ಗುಂಟೆ ಜಮೀನು ಮೈಸೂರು ಅಭಿವೃದ್ದಿ ಪ್ರಾಧಿಕಾರದ ಸೊತ್ತು.ಇದರಲ್ಲಿ 378.18 ಚದರ ಮೀಟರ್ ವಿಸ್ತೀರ್ಣದ ಜಾಗವನ್ನ ಸಿಎ ನಿವೇಶನಕ್ಕಾಗಿ ಕಾಯ್ದಿರಿಸಲಾಗಿದೆ.ಸದರಿ ಸಿಎ ನಿವೇಶನದಲ್ಲಿ ರಾಘವೇಂದ್ರ ಪಿಸಿ ಎಜುಕೇಷನ್ ಹಾಗೂ ಚಾರಿಟೇಬಲ್ ಟ್ರಸ್ಟ್ ನವರು ಅನಧಿಕೃತವಾಗಿ ಶಾಲಾ ಕಟ್ಟಡ ನಿರ್ಮಿಸುತ್ತಿದ್ದರು.ಈ ಮಾಹಿತಿ ಅರಿತ ಪ್ರಾಧಿಕಾರದ ಆಯುಕ್ತ ಟಿ.ಎಸ್.ರಕ್ಷಿತ್ ರಕ್ಷಿಸುವ ನಿಟ್ಟಿನಲ್ಲಿ ಮುಂದಾಗಿದ್ದಾರೆ.ಇಂದು ಉದಯಗಿರಿ ಠಾಣಾ ಪೊಲೀಸರ ನೆರವಿನಿಂದ ಅನಧಿಕೃತ ಕಟ್ಟಡವನ್ನ ನೆಲಸಮಗೊಳಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ.ಸದರಿ ನಿವೇಶನದ ಮೌಲ್ಯ ಸುಮಾರು 80 ರಿಂದ 90 ಲಕ್ಷ ಎನ್ನಲಾಗಿದೆ.ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ಕುಮಾರ್,ಕಿರಿಯ ಅಭಿಯಂತರ ಜಿ.ರಾಜಶೇಖರ್,ಭೂಮಾಪಕರಾದ ರಘು ರವರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಪ್ರಾಧಿಕಾರದ ಆಸ್ತಿ ಸಂರಕ್ಷಣೆಗಾಗಿ 13-10-2025 ರಂದು ವಿಶೇಷ ಟಾಸ್ಕ್ ಫೋರ್ಸ್ ರಚಿಸಲಾಗಿದೆ.ಕಾರ್ಯಪಾಲಕ ಅಭಿಯಂತರ ಮಹೇಶ್ ಹಾಗೂ ನಾಗೇಶ್ ,ಅಧಿಕಾರಿಗಳಾದ ರಾಜಶೇಖರ್,ಭರತ್ ಕುಮಾರ್,ರಘು,ಸಚಿನ್,ರವಿಪ್ರಸಾದ್,ಗಂಗಾಧರ್,ಮಹದೇವಸ್ವಾಮಿ,ಶೃತಿ,ಕೆಂಪಣ್ಣ,ಉಮೇಶ್ ರವರನ್ನೊಳಗೊಂಡಿದೆ….

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *