ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…
- TV10 Kannada Exclusive
- January 29, 2026
- No Comment
- 13
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…
ಸುತ್ತೂರು,ಜ29,Tv10 ಕನ್ನಡ
ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆ
ಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ರವಿಕುಮಾರ್(37) ಮೃತ ದುರ್ದೈವಿ. ಜ.21 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿಕುಮಾರ್.
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿಯ ನಿವಾಸಿಯಾದ ರವಿಕುಮಾರ್ ರವರು
ಆನಂದ್ ಎಂಬುವರ ಬಳಿ ಕೆಲಸ ಮಾಡುತ್ತಿದ್ದರು.ರಾತ್ರಿ ಸಮಯದಲ್ಲಿ ಕಟೌಟ್ ತೆರವು ಮಾಡಿಸಲು ಕರೆದುಕೊಂಡು ಹೋಗಿದ್ದರು.
ಯಾವುದೇ ರಕ್ಷಣಾತ್ಮಕ ಪರಿಕರಗಳಿಲ್ಲದೆ ಕೆಲಸ ಮಾಡಿದ ಆರೋಪ. ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಇದಕ್ಕೆಲ್ಲ ಆನಂದ್ ಎಂಬ ವ್ಯಕ್ತಿ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ…