ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ…

ನಂಜನಗೂಡು,ಜ31,Tv10 ಕನ್ನಡ

ಗ್ರಾಮದ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಬಾವುಟ ಅಳವಡಿಸಿದ ಹಿನ್ನಲೆ ಉಂಟಾದ ವಿವಾದ ಜಾತ್ರೆ ಸಂಭ್ರಮವನ್ನ ಮೊಟಕುಗೊಳಿಸಿದ ಘಟನೆ ನಂಜನಗೂಡು ತಾಲೂಕು ಹಗಿನವಾಳು ಗ್ರಾಮದಲ್ಲಿ ನಡೆದಿದೆ.ಬಾವುಟ ತೆಗೆಯುವ ವಿಚಾರದಲ್ಲಿ ಎರಡು ಸಮುದಾಯದ ನಡುವೆ ಉಂಟಾದ ಮಾತಿನ ಚಕಮಕಿ ಜಾತ್ರೆ ಸ್ಥಗಿತವಾಗುವಂತೆ ಮಾಡಿದೆ.ವಿದ್ಯುಕ್ತ ಚಾಲನೆ ದೊರೆತು ಅಧ್ದೂರಿಯಿಂದ ಆರಂಭವಾದ ರಥೋತ್ಸವ ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿದೆ.ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನಂಜನಗೂಡು ತಾಲೂಕು ಹಗಿನವಾಳು ಗ್ರಾಮದ ಪಟ್ಟದ ರಾಣಿ ಅಮ್ಮ ದೇವತೆಯ ಜಾತ್ರಾ ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಿತು.ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸಿದ್ದರು.ದೇವಾಲಯದ ಸಮೀಪವಿರುವ ವೃತ್ತದ ಬಳಿ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಭಾವಚಿತ್ರವಿರುವ ಬಾವುಟ ಅಳವಡಿಸಲಾಗಿತ್ತು.ಜಾತ್ರೆ ತೇರು ಇದೇ ವೃತ್ತದಿಂದ ಸಾಗಬೇಕಿತ್ತು.ಒಂದು ಸಮುದಾಯ ಬಾವುಟವನ್ನ ತೆರವುಗೊಳಿಸುವಂತೆ ಪಟ್ಟು ಹಿಡಿಯಿತು.ಮತ್ತೊಂದು ಸಮುದಾಯ ಬಾವುಟ ತೆರವುಗೊಳಿಸಲು ವಿರೋಧಿಸಿತು.ಈ ವೇಳೆ ಬಾವುಟದ ಬಳಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಮುಂದಾದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಾತಿನ ಚಕಮಕಿಗೆ ಇಳಿಯಿತು.ಅದ್ದೂರಿಯಿಂದ ಆರಂಭವಾದ ಜಾತ್ರೆಯ ರಥ ಅರ್ಧಕ್ಕೆ ಸ್ಥಗಿತವಾಯಿತು.ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿತು.ಇದೇ ವೇಳೆ ದೇವಾಲಯಕ್ಕೆ ಬೀಗ ಜಡಿದ ಒಂದು ಸಮುದಾಯ ಪೂಜಾ ಕೈಂಕರ್ಯಗಳಿಗೂ ಬ್ರೇಕ್ ಹಾಕಿತು.ಎರಡು ಸಮುದಾಯಗಳು ಯಾವುದೇ ತೀರ್ಮಾನಕ್ಕೆ ಬರದೆ ಪಟ್ಟು ಹಿಡಿದು ಕುಳಿತ ಕಾರಣ ಇದೀಗ ರಥ ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿದೆ.ಸಧ್ಯ ಪೊಲೀಸರು ಸ್ಥಳಕ್ಕೆ ಬಂದು ಎರಡು ಸಮುದಾಯದ ಮುಖಂಡರ ಮನ ಒಲಿಕೆಗೆ ಯತ್ನಿಸಿದರಾದರೂ ಪಟ್ಟು ಸಡಿಲಿಸಲಿಲ್ಲ.ಸಧ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಜಾತ್ರೆಯ ಸಂಭ್ರಮಕ್ಕೆ ಮಂಕು ಕವಿದಂತಾಗಿದೆ.ವ್ಯಾಪಾರಿಗಳು ಹೈರಾಣರಾಗಿದ್ದಾರೆ.ಹೊರಗಿನಿಂದ ಬಂದ ಭಕ್ತರು ಬೇಸತ್ತಿದ್ದಾರೆ…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *