ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ…

ನಂಜನಗೂಡು,ಜ31,Tv10 ಕನ್ನಡ

ಗ್ರಾಮದ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಬಾವುಟ ಅಳವಡಿಸಿದ ಹಿನ್ನಲೆ ಉಂಟಾದ ವಿವಾದ ಜಾತ್ರೆ ಸಂಭ್ರಮವನ್ನ ಮೊಟಕುಗೊಳಿಸಿದ ಘಟನೆ ನಂಜನಗೂಡು ತಾಲೂಕು ಹಗಿನವಾಳು ಗ್ರಾಮದಲ್ಲಿ ನಡೆದಿದೆ.ಬಾವುಟ ತೆಗೆಯುವ ವಿಚಾರದಲ್ಲಿ ಎರಡು ಸಮುದಾಯದ ನಡುವೆ ಉಂಟಾದ ಮಾತಿನ ಚಕಮಕಿ ಜಾತ್ರೆ ಸ್ಥಗಿತವಾಗುವಂತೆ ಮಾಡಿದೆ.ವಿದ್ಯುಕ್ತ ಚಾಲನೆ ದೊರೆತು ಅಧ್ದೂರಿಯಿಂದ ಆರಂಭವಾದ ರಥೋತ್ಸವ ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿದೆ.ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನಂಜನಗೂಡು ತಾಲೂಕು ಹಗಿನವಾಳು ಗ್ರಾಮದ ಪಟ್ಟದ ರಾಣಿ ಅಮ್ಮ ದೇವತೆಯ ಜಾತ್ರಾ ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಿತು.ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸಿದ್ದರು.ದೇವಾಲಯದ ಸಮೀಪವಿರುವ ವೃತ್ತದ ಬಳಿ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಭಾವಚಿತ್ರವಿರುವ ಬಾವುಟ ಅಳವಡಿಸಲಾಗಿತ್ತು.ಜಾತ್ರೆ ತೇರು ಇದೇ ವೃತ್ತದಿಂದ ಸಾಗಬೇಕಿತ್ತು.ಒಂದು ಸಮುದಾಯ ಬಾವುಟವನ್ನ ತೆರವುಗೊಳಿಸುವಂತೆ ಪಟ್ಟು ಹಿಡಿಯಿತು.ಮತ್ತೊಂದು ಸಮುದಾಯ ಬಾವುಟ ತೆರವುಗೊಳಿಸಲು ವಿರೋಧಿಸಿತು.ಈ ವೇಳೆ ಬಾವುಟದ ಬಳಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಮುಂದಾದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಾತಿನ ಚಕಮಕಿಗೆ ಇಳಿಯಿತು.ಅದ್ದೂರಿಯಿಂದ ಆರಂಭವಾದ ಜಾತ್ರೆಯ ರಥ ಅರ್ಧಕ್ಕೆ ಸ್ಥಗಿತವಾಯಿತು.ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿತು.ಇದೇ ವೇಳೆ ದೇವಾಲಯಕ್ಕೆ ಬೀಗ ಜಡಿದ ಒಂದು ಸಮುದಾಯ ಪೂಜಾ ಕೈಂಕರ್ಯಗಳಿಗೂ ಬ್ರೇಕ್ ಹಾಕಿತು.ಎರಡು ಸಮುದಾಯಗಳು ಯಾವುದೇ ತೀರ್ಮಾನಕ್ಕೆ ಬರದೆ ಪಟ್ಟು ಹಿಡಿದು ಕುಳಿತ ಕಾರಣ ಇದೀಗ ರಥ ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿದೆ.ಸಧ್ಯ ಪೊಲೀಸರು ಸ್ಥಳಕ್ಕೆ ಬಂದು ಎರಡು ಸಮುದಾಯದ ಮುಖಂಡರ ಮನ ಒಲಿಕೆಗೆ ಯತ್ನಿಸಿದರಾದರೂ ಪಟ್ಟು ಸಡಿಲಿಸಲಿಲ್ಲ.ಸಧ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಜಾತ್ರೆಯ ಸಂಭ್ರಮಕ್ಕೆ ಮಂಕು ಕವಿದಂತಾಗಿದೆ.ವ್ಯಾಪಾರಿಗಳು ಹೈರಾಣರಾಗಿದ್ದಾರೆ.ಹೊರಗಿನಿಂದ ಬಂದ ಭಕ್ತರು ಬೇಸತ್ತಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *