ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ…

ನಂಜನಗೂಡು,ಜ31,Tv10 ಕನ್ನಡ

ಗ್ರಾಮದ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಬಾವುಟ ಅಳವಡಿಸಿದ ಹಿನ್ನಲೆ ಉಂಟಾದ ವಿವಾದ ಜಾತ್ರೆ ಸಂಭ್ರಮವನ್ನ ಮೊಟಕುಗೊಳಿಸಿದ ಘಟನೆ ನಂಜನಗೂಡು ತಾಲೂಕು ಹಗಿನವಾಳು ಗ್ರಾಮದಲ್ಲಿ ನಡೆದಿದೆ.ಬಾವುಟ ತೆಗೆಯುವ ವಿಚಾರದಲ್ಲಿ ಎರಡು ಸಮುದಾಯದ ನಡುವೆ ಉಂಟಾದ ಮಾತಿನ ಚಕಮಕಿ ಜಾತ್ರೆ ಸ್ಥಗಿತವಾಗುವಂತೆ ಮಾಡಿದೆ.ವಿದ್ಯುಕ್ತ ಚಾಲನೆ ದೊರೆತು ಅಧ್ದೂರಿಯಿಂದ ಆರಂಭವಾದ ರಥೋತ್ಸವ ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿದೆ.ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನಂಜನಗೂಡು ತಾಲೂಕು ಹಗಿನವಾಳು ಗ್ರಾಮದ ಪಟ್ಟದ ರಾಣಿ ಅಮ್ಮ ದೇವತೆಯ ಜಾತ್ರಾ ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಿತು.ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸಿದ್ದರು.ದೇವಾಲಯದ ಸಮೀಪವಿರುವ ವೃತ್ತದ ಬಳಿ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಭಾವಚಿತ್ರವಿರುವ ಬಾವುಟ ಅಳವಡಿಸಲಾಗಿತ್ತು.ಜಾತ್ರೆ ತೇರು ಇದೇ ವೃತ್ತದಿಂದ ಸಾಗಬೇಕಿತ್ತು.ಒಂದು ಸಮುದಾಯ ಬಾವುಟವನ್ನ ತೆರವುಗೊಳಿಸುವಂತೆ ಪಟ್ಟು ಹಿಡಿಯಿತು.ಮತ್ತೊಂದು ಸಮುದಾಯ ಬಾವುಟ ತೆರವುಗೊಳಿಸಲು ವಿರೋಧಿಸಿತು.ಈ ವೇಳೆ ಬಾವುಟದ ಬಳಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಮುಂದಾದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಾತಿನ ಚಕಮಕಿಗೆ ಇಳಿಯಿತು.ಅದ್ದೂರಿಯಿಂದ ಆರಂಭವಾದ ಜಾತ್ರೆಯ ರಥ ಅರ್ಧಕ್ಕೆ ಸ್ಥಗಿತವಾಯಿತು.ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿತು.ಇದೇ ವೇಳೆ ದೇವಾಲಯಕ್ಕೆ ಬೀಗ ಜಡಿದ ಒಂದು ಸಮುದಾಯ ಪೂಜಾ ಕೈಂಕರ್ಯಗಳಿಗೂ ಬ್ರೇಕ್ ಹಾಕಿತು.ಎರಡು ಸಮುದಾಯಗಳು ಯಾವುದೇ ತೀರ್ಮಾನಕ್ಕೆ ಬರದೆ ಪಟ್ಟು ಹಿಡಿದು ಕುಳಿತ ಕಾರಣ ಇದೀಗ ರಥ ರಸ್ತೆ ಮಧ್ಯದಲ್ಲೇ ಅನಾಥವಾಗಿ ನಿಂತಿದೆ.ಸಧ್ಯ ಪೊಲೀಸರು ಸ್ಥಳಕ್ಕೆ ಬಂದು ಎರಡು ಸಮುದಾಯದ ಮುಖಂಡರ ಮನ ಒಲಿಕೆಗೆ ಯತ್ನಿಸಿದರಾದರೂ ಪಟ್ಟು ಸಡಿಲಿಸಲಿಲ್ಲ.ಸಧ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಜಾತ್ರೆಯ ಸಂಭ್ರಮಕ್ಕೆ ಮಂಕು ಕವಿದಂತಾಗಿದೆ.ವ್ಯಾಪಾರಿಗಳು ಹೈರಾಣರಾಗಿದ್ದಾರೆ.ಹೊರಗಿನಿಂದ ಬಂದ ಭಕ್ತರು ಬೇಸತ್ತಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *