ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಮೈಸೂರು,ಫೆ10,Tv10 ಕನ್ನಡ

ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ ಶಂಕಿತ ಪ್ರದೇಶಗಳಲ್ಲಿ ದಾಳಿ ನಡೆಸುತ್ತಿದೆ.ಠಾಣೆಗಳಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ಕಿರುಕುಳ ನೀಡುವ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಿಸಲಾಗುತ್ತಿದೆ.ಮತ್ತೊಂದೆಡೆ ಯುವ ಜನತೆಗೆ ಡ್ರಗ್ಸ್ ನಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿದೆ.ವಿಶೇಷವಾಗಿ ಯುವ ಜನತೆಯನ್ನ ಕೇಂದ್ರವನ್ನಾಗಿಟ್ಟುಕೊಂಡು ಜಾಗೃತಿ ಮೂಡಿಸಲಾಗುತ್ತಿದೆ.ಡ್ರಗ್ಸ್ ಹಾವಳಿ ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ನೂತನ ಯೋಜನೆ ಜಾರಿಯಾಗಿದೆ.ವಿಮುಕ್ತಿ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಜಾರಿಗೊಳಿಸಿ ವಾಟ್ಸಾಪ್ ನಂ.ಬಿಡುಗಡೆ ಮಾಡಲಾಗಿದೆ.ಮೈಸೂರು ಕೆ ಆರ್ ಎಸ್ ರಸ್ತೆಯಲ್ಲಿರುವ ಪರಿವರ್ತನ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳಿಗೆ ಪ್ರತ್ಯೇಕ ವಾಟ್ಸ್ ಆಪ್ ನಂಬರ್ ನೀಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ವಿಮುಕ್ತಿ ಎಂದು ಹೆಸರಿನಲ್ಲಿ ಕಾರ್ಯಾಚರಣೆ ನಡೆಯಲಿದ್ದು ಮಾಹಿತಿದಾರರ ಹೆಸರನ್ನ ಗೌಪ್ಯವಾಗಿ ಕಾಪಾಡುವ ಭರವಸೆ ನೀಡಲಾಯಿತು.ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಬಳಕೆ ಅಥವಾ ಮಾರಾಟದ ಬಗ್ಗೆ ಕಂಡುಬಂದಲ್ಲಿ ವಾಟ್ಸಾಪ್ ನಂಬರ್ ಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಲಾಯಿತು.ಸುರಕ್ಷಿತ ಮಕ್ಕಳ ಭವಿಷ್ಯಕ್ಕೆ ಹಾಗೂ ನೆಮ್ಮದಿಯ ಶಾಂತಿಯುತ ಮೈಸೂರಿಗೆ ಕೈ ಜೋಡಿಸುವಂತೆ ವಿಜಯನಗರ ವಿಭಾಗದ ಎಸಿಪಿ ರವಿಪ್ರಸಾದ್ ರವರು ಕರೆ ನೀಡಿದರು.ಈ ವೇಳೆ ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಸಬ್ ಇನ್ಸ್ಪೆಕ್ಟರ್ ಗೌತಮ್ ಗೌಡ, ವಿಧ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಹಾಜರಿದ್ದರು.ಮುಂದಿನ ದಿನಗಳಲ್ಲಿ ಮೈಸೂರು ನಗರದ ವಿವಿದ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ‌ ಆಯೋಜಿಸಿ ಅರಿವು ಮೂಡಿಸಲು ಸಜ್ಜಾಗಿದ್ದಾರೆ…

ವಿಮುಕ್ತಿ ಯೋಜನೆ ವಾಟ್ಸಾಪ್ ನಂ. 8277948080

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *