ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ನಂಜನಗೂಡು,ಫೆ16,Tv10 ಕನ್ನಡ

ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ.

ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ.

ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ…?

Spread the love

Related post

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…
ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…

Leave a Reply

Your email address will not be published. Required fields are marked *