ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ನಂಜನಗೂಡು,ಫೆ16,Tv10 ಕನ್ನಡ

ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ.

ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ.

ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ…?

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *