ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ,ಮಾ13,Tv10 ಕನ್ನಡ

ಮಂಡ್ಯ ಪೂರ್ವ ಹಾಗೂ ಪಶ್ಚಿಮ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ ಹಿನ್ನಲೆ
ವಿವಿಧೆಡೆ ಬೈಕ್ ಗಳ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನವಾಗಿದೆ.
ಬರೋಬ್ಬರಿ 15 TVS XL ಬೈಕ್ ಹಾಗೂ 12 ಡಿಯೋ ಬೈಕ್ ಕದ್ದ ಐನಾತಿಗಳು ಸಿಕ್ಕಿಬಿದ್ದಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣದಡಿ ಕೃತ್ಯದಲ್ಲಿ ಭಾಗಿಯದ ಆರೋಪಿಗಳನ್ನು ಬಂಧಿಸಲಾಗಿದೆ.
ಮಂಡ್ಯ ಹಾಗು ಮೈಸೂರು ಜಿಲ್ಲೆಯ ವಿವಿಧೆಡೆ ಬೈಕ್ ಗಳ ಕಳ್ಳತನ ಮಾಡಿದ್ದ ಖತರ್ನಾಕ್ ಗಳು.
ಮಂಡ್ಯದ ಪೂರ್ವ ಮತ್ತು ಪಶ್ವಿಮ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧಿಸಿ ಕಳ್ಳತನ ಮಾಡಿದ್ದ ಮಾಲು ಜಪ್ತಿ ಮಾಡಿದ್ದಾರೆ.
ಬಂಧಿತರಿಂದ 14 ಲಕ್ಷ ರೂ ಮೌಲ್ಯದ 27 ಬೈಕ್ ಸೇರಿ 3 ಲಕ್ಷ ರೂ ಮೌಲ್ಯದ ಚಿನ್ನದ ಸರ ವಶ ಪಡಿಸಿಕೊಳ್ಳಲಾಗಿದೆ.
ಮಂಡ್ಯ ತಾ.ಕಾಗೇಹಳ್ಳದೊಡ್ಡಿಯ
ಚಂದ್ರಶೇಖರ್ 15ಕ್ಕೂ ಹೆಚ್ಚು ರೈತರ XL ಬೈಕ್ ಕದ್ದಿದ್ದ ಆರೋಪಿ.
ರೈತರು ಮನೆ ಹಾಗೂ ಜಮೀನಿನ ಬಳಿ ಬೈಕ್ ಗಳನ್ನ ನಿಲ್ಲಿಸಿದ್ದ ಸಂದರ್ಭದಲ್ಲಿ ಸ್ಕೆಚ್ ಹಾಕಿ ಎಗರಿಸುತ್ತಿದ್ದ ಖತರ್ನಾಕ್.
XL ಬೈಕ್ ಗಳನ್ನೆ ಟಾರ್ಗೆಟ್ ಮಾಡಿ ಕದ್ದು ಬೇರೆಯವರಿಗೆ ಮಾರಾಟ ಮಾಡ್ತಿದ್ದ ಐನಾತಿ.ಆರೋಪಿತನಿಂದ ಸುಮಾರು 5,75,000 ಮೌಲ್ಯದ 15 XL ಬೈಕ್ ವಶ.ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ರಿಹಾನ್ ಪಾಷ, ಸೈಯದ್ ಅಯಾನ್ ಹಾಗೂ ಮತ್ತೋರ್ಬ ಅಪ್ರಾಪ್ತ ಬಂಧಿತರಾಗಿದ್ದಾರೆ.
ಮೂವರು ಸೇರಿ ಸುಮಾರು 12 ಡಿಯೋ ಬೈಕ್ ಗಳನ್ನು ಕದ್ದಿದ್ದ ಖತರ್ನಾಕ್ ಗಳು.
ಪ್ರಕರಣ ಬೇದಿಸಿ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು.
ಎರಡೂ ಪ್ರತ್ಯೇಕ ಪ್ರಕರಣದ ಪತ್ತೆಗೆ ತಂಡ ರಚಿಸಿದ್ದ ಎಸ್ಪಿ.
ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶೇಷಾದ್ರಿಕುಮಾರ್, ಸಿಬ್ಬಂದಿಗಳಾದ ಲಿಂಗರಾಜು,ಉಮರ್, ರವಿಕಿರಣ್, ಶಿವಕುಮಾರ್ ಲೋಕೇಶ್ ಒಳಗೊಂಡ ತಂಡ ರಚಿಸಲಾಗಿತ್ತು.
ಪ್ರಕರಣ ಬೇಧಿಸಿ ಮಾಲು ಜಪ್ತಿ ಮಾಡಿದ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಡಾ.ಶೋಭಾರಾಣಿ ಪ್ರಶಂಸೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *