ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಎಚ್.ಡಿ.ಕೋಟೆ,ಮಾ27,Tv10 ಕನ್ನಡ

ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ.
ಗಿರೀಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅಳವಡಿಸಿದ್ದ ಹುರುಳಿಗೆ ಸುಮಾರು 3,ವರ್ಷದ ಗಂಡು ಹುಲಿ ಸಿಲುಕಿಕೊಂಡು ಸಾವನ್ನಪ್ಪಿದೆ. 2-3 ದಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ತಜ್ಞರ ತಂಡ ಹುಲಿ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಿ ಕಳೆಬರಕ್ಕೆ ಅಗ್ನಿ ಸ್ಪರ್ಶ ಮಾಡಿದರು.
ಕಾಡು ಹಂದಿಗಳ ಬೇಟೆಗಾಗಿ ಜಮೀನಿನಲ್ಲಿ ಅಕ್ರಮವಾಗಿ ಹುರುಳು ಹಾಕಿರಬಹುದೆಂದು ಅಂದಾಜಿಸಲಾಗಿದ್ದು ತನಿಖೆ ನಂತರವಷ್ಟೇ ಸತ್ಯ ಸಂಗತಿ ಹೊರಬೀಳಬೇಕಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವಲಯದ 2ನೇ ಗಸ್ತಿಗೆ‌ ಸೇರಿದ ಜಮೀನಿನಲ್ಲಿ ಹುಲಿ ಮೃತಪಟ್ಟಿದೆ. ಮೇಟಿಕುಪ್ಪೆ ವಲಯ ಅರಣ್ಯಾಧಿಕಾರಿಗಳ ತಂಡ ಸ್ಥಳಕ್ಕೆ ಬೇಟಿ ನೀಡಿ ಮಹಜರು ನಡೆಸಿದ‌ ಬಳಿಕ ಗಿರೀಶ್ ವಿರುದ್ದ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *