ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

  • Crime
  • March 28, 2026
  • No Comment
  • 305

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರು,ಮಾ28,Tv10 ಕನ್ನಡ

ಹುಸಿಬಾಂಬ್ ಸಂದೇಶಗಳನ್ನ ಕಳಿಸಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿ ದೆಹಲಿ ಪೊಲೀಸರ ಅತಿಥಿಯಾಗಿದ್ದಾನೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಡಗಿ ಕುಳಿತು ನಿಗೂಢವಾಗಿ ಬಾಂಬ್ ಸ್ಪೋಟಿಸುವ ಸಂದೇಶಗಳನ್ನ ಕಳಿಸಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ.ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತ 6 ನೇ ಕ್ರಾಸ್ ನ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ.ಶ್ರೀನಿವಾಸ್ ಬಂಧಿತ ಆರೋಪಿ.ಇತ್ತೀಚೆಗೆ ಸರ್ಕಾರಿ ಕಚೇರಿಗಳು,ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟವಾಗುವ ಬೆದರಿಕೆ ಸಂದೇಶ ರವಾನೆಯಾಗಿ ಆತಂಕ ಸೃಷ್ಟಿಯಾಗಿತ್ತು.ಒಂದೇ ತಿಂಗಳಿನಲ್ಲಿ ಹಲವು ಬಾರಿ ಮೇಲ್ ಮೂಲಕ ಸಂದೇಶ ರವಾನೆ ಆಗಿದೆ.ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಕಿಡಿಗೇಡಿಯನ್ನ ಬಂಧಿಸಲು ಕಾರ್ಯಾಚರಣೆಗೆ ಮುಂದಾಗಿದೆ. ಮೈಸೂರಿನಿಂದ ಕಾರ್ಯಾಚರಣೆ ಮಾಡಿರುವ ಮಾಹಿತಿ ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ದೆಹಲಿ ಪೊಲೀಸರ ತಂಡ ಧಿಢೀರ್ ದಾಳಿ ನಡೆಸಿ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.ದೆಹಲಿ ಪೊಲೀಸರಿಗೆ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದಾರೆ.ಆರೋಪಿ ಶ್ರೀನಿವಾಸ್ ನನ್ನು ಹೆಚ್ಚಿನ ವಿಚಾರಣೆಗೆ ದೆಹಲಿ ಪೊಲೀಸರು ಕರೆದೊಯ್ಯಲಿದ್ದಾರೆ.ಆರೋಪಿಯ ಮನೆಯಲ್ಲಿ ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಸೀಜ್ ಮಾಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *