ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

  • Crime
  • March 28, 2026
  • No Comment
  • 285

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರು,ಮಾ28,Tv10 ಕನ್ನಡ

ಹುಸಿಬಾಂಬ್ ಸಂದೇಶಗಳನ್ನ ಕಳಿಸಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿ ದೆಹಲಿ ಪೊಲೀಸರ ಅತಿಥಿಯಾಗಿದ್ದಾನೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಡಗಿ ಕುಳಿತು ನಿಗೂಢವಾಗಿ ಬಾಂಬ್ ಸ್ಪೋಟಿಸುವ ಸಂದೇಶಗಳನ್ನ ಕಳಿಸಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ.ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತ 6 ನೇ ಕ್ರಾಸ್ ನ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ.ಶ್ರೀನಿವಾಸ್ ಬಂಧಿತ ಆರೋಪಿ.ಇತ್ತೀಚೆಗೆ ಸರ್ಕಾರಿ ಕಚೇರಿಗಳು,ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟವಾಗುವ ಬೆದರಿಕೆ ಸಂದೇಶ ರವಾನೆಯಾಗಿ ಆತಂಕ ಸೃಷ್ಟಿಯಾಗಿತ್ತು.ಒಂದೇ ತಿಂಗಳಿನಲ್ಲಿ ಹಲವು ಬಾರಿ ಮೇಲ್ ಮೂಲಕ ಸಂದೇಶ ರವಾನೆ ಆಗಿದೆ.ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಕಿಡಿಗೇಡಿಯನ್ನ ಬಂಧಿಸಲು ಕಾರ್ಯಾಚರಣೆಗೆ ಮುಂದಾಗಿದೆ. ಮೈಸೂರಿನಿಂದ ಕಾರ್ಯಾಚರಣೆ ಮಾಡಿರುವ ಮಾಹಿತಿ ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ದೆಹಲಿ ಪೊಲೀಸರ ತಂಡ ಧಿಢೀರ್ ದಾಳಿ ನಡೆಸಿ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.ದೆಹಲಿ ಪೊಲೀಸರಿಗೆ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದಾರೆ.ಆರೋಪಿ ಶ್ರೀನಿವಾಸ್ ನನ್ನು ಹೆಚ್ಚಿನ ವಿಚಾರಣೆಗೆ ದೆಹಲಿ ಪೊಲೀಸರು ಕರೆದೊಯ್ಯಲಿದ್ದಾರೆ.ಆರೋಪಿಯ ಮನೆಯಲ್ಲಿ ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಸೀಜ್ ಮಾಡಿದ್ದಾರೆ…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *