ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ…

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ…

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ…

ರಾಮನಗರ,ಏ1,Tv10 ಕನ್ನಡ

ಒಂದೆಡೆ ಮಾನವ ಪ್ರಾಣಿ ಸಂಘರ್ಷ ತಾರಕಕ್ಕೆ ಏರುತ್ತಿದೆ.ಮತ್ತೊಂದೆಡೆ ಮಾನವ ಪ್ರಾಣಿಯ ಅವಿನಾನುಭಾವ ಸಂಬಂಧಕ್ಕೆಬೆಲೆಯೇ ಕಟ್ಟಲಾಗದಂತಹ ಸನ್ನಿವೇಶಗಳು ಕಾಣಿಸುತ್ತವೆ.ಅಂತಹದ್ದೊಂದು ಹೃದಯಸ್ಪರ್ಶಿ ಸನ್ನಿವೇಶ ರಾಮನಗರದಲ್ಲಿ ಕಂಡುಬಂದಿದೆ.ಪುಟಾಣಿ ಮರಿಯಿಂದ ಮಂಗವೊಂದಕ್ಕೆ ವೃದ್ದೆ ಪಾರ್ವತಮ್ಮ ತುತ್ತು ನೀಡಿದ್ದಾರೆ.ಅಕ್ಕರೆಯಿಂದ ಕೋತಿಯನ್ನ ನೋಡಿಕೊಂಡಿದ್ದಾರೆ.ವಾನರ ಮತ್ತು ಪಾರ್ವತಮ್ಮನ ನಡುವಿನ ಒಡನಾಟ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.ಸ್ಥಳೀಯರಿಗಂತೂ ಇಬ್ಬರ ಸಂಬಂಧ ನೋಡಿ ಸಂತಸ ವ್ಯಕ್ತಪಡಿಸುವುದೇ ಒಂದು ಖುಷಿ.ವಾನರನಿಗೆ ತುತ್ತು ನೀಡಿ ಆರೈಕೆ ಮಾಡಿದ್ದ ಪಾರ್ವತಮ್ಮ ಕೊನೆ ಉಸಿರೆಳೆದಿದ್ದಾರೆ.ಬದುಕಿನ ಪಯಣ ಮುಗಿಸಿದ ಪಾರ್ವತಮ್ಮನಿಗೆ ಸಾಕಿ ಸಲುಹಿದ ವಾನರ ಅಂತಿಮ ವಿದಾಯ ಹೇಳುವ ದೃಶ್ಯ ಮನಮಿಡಿಯುವಂತೆ ಮಾಡಿದೆ.ಪಾರ್ವತಮ್ಮ ರವರ ಮೃತದೇಹದ ಬಳಿ ಕುಳಿತ ಮಂಗ ಕಂಬನಿ ಮಿಡಿದು ಹೊರಳಾಡಿದೆ.ಇಂತಹ ಅಪೂರ್ವ ಸನ್ನಿವೇಶಕ್ಕೆ ಸ್ಥಳೀಯ ಜನ ಮೂಕಸಾಕ್ಷಿಯಾಗಿದ್ದಾರೆ.ಮೂಲತಃ ಚನ್ನಪಟ್ಟಣ ತಾಲ್ಲೂಕಿನ ಬಿ.ವಿ. ಹಳ್ಳಿ ಗ್ರಾಮದ ಪಾರ್ವತಮ್ಮ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ.
ರಾಮನಗರದ ರಾಯರದೊಡ್ಡಿಯಲ್ಲಿರುವ ತನ್ನ ಮಗಳ ಮನೆಯಲ್ಲಿ ಪಾರ್ವತಮ್ಮ ವಾಸವಿದ್ದರು.ಪಾರ್ವತಮ್ಮನ ಅಗಲಿಕೆ ವಾನರನಿಗೆ ನೋವನ್ನ ತಂದಿದೆ.ತನಗೆ ತುತ್ತು ನೀಡಿದ ಪಾರ್ವತಮ್ಮರ ಸಾವಿಗೆ ಮರುಗಿದೆ.ಮೃತದೇಹದ ಮೇಲೆ ಹೊರಳಾಡಿ ಅಂತಿಮ ವಿದಾಯ ಹೇಳಿದ ಸನ್ನಿವೇಶ ಮನಕಲುಕುವಂತೆ ಮಾಡಿದೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *