ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..
- TV10 Kannada Exclusive
- April 2, 2026
- No Comment
- 6
ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..
ಬೆಂಗಳೂರು,ಏ2,Tv10 ಕನ್ನಡ
ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನ ಭೈರವೇಶ್ವರ ನಗರದಲ್ಲಿ ನಡೆದಿದೆ.11 ತಿಂಗಳ ಮಗು ಅಗಸ್ತ್ಯ ಹಾಗೂ ತಾಯಿ ಪ್ರತಿಭಾ (29) ನೇಣಿಗೆ ಶರಣಾದವರು.
ಪ್ರತಿಭಾ ಹಾಗೂ ಪತಿ ಮಹಾಂತೇಶ್ ಸಾಫ್ಟ್ ವೆರ್ ಉದ್ಯೋಗಿಯಾಗಿದ್ದಾರೆ. ಪತಿ ಮಹಾಂತೇಶ್ ಕೆಲಸದ ನಿಮಿತ್ತ ಬೇರೆ ಕಡೆಗೆ ತೆರಳಿದ್ದರು. ಈ ವೇಳೆ ಮಗು ಮನೆಯಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಸಾವನ್ನಪ್ಪಿದೆ. ಇದರಿಂದ ಮನನೊಂದ ಪ್ರತಿಭಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾನು ಬಟ್ಟೆ ತರಲು ಹೋದಾಗ ಈ ಘಟನೆ ನಡೆದಿದೆ. ಹಾಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಮೊದಲಿಗೆ ಮಾತ್ರೆ ನುಂಗಿ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ರಕ್ತ ಬಾರದ ಹಿನ್ನೆಲೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ…