ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…
- TV10 Kannada Exclusive
- April 3, 2026
- No Comment
- 47
ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…
ನಂಜನಗೂಡು,ಏ3,Tv10 ಕನ್ನಡ
ಕ್ಷುಲ್ಲಕ ವಿಚಾರಕ್ಕೆ ನಂಜನಗೂಡಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ 5 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂಜನಗೂಡು ನಗರದ ನೀಲಕಂಠನಗರ ಬಡಾವಣೆಯಲ್ಲಿ ಘಟನ ನಡೆದಿದೆ. ಬಡಾವಣೆಯ ಚಾಂದ್ ಸಾಬ್ ಎಂಬುವರ ಮನೆಯ ಮುಂಭಾಗದಲ್ಲಿ ಮಾರಾಮಾರಿ ನಡೆದಿದೆ.
ಕಾರ್ ಪಾರ್ಕಿಂಗ್ ಮಾಡುವ ವಿಚಾರವಾಗಿ ಪ್ರಾರಂಭವಾದ ಗಲಾಟೆ ಹೊಡೆದಾಟಕ್ಕೆ ಇಳಿದಿದೆ.
ಸದ್ದಾಂ ಮತ್ತು ಖುದ್ದುಸ್ ಎಂಬುವರ ನಡುವೆ ಕಾರು ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ.
ಖುದ್ದು ಎಂಬುವರ ತಂದೆ ಚಾಂದ್ ಸಾಬ್ ಎಂಬುವರನ್ನು ಸದ್ದಾಂ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ ಎಂದು ಗಲಾಟೆ ಪ್ರಾರಂಭವಾಗಿದೆ. ಚಾಕು ಚೂರಿ ಮಚ್ಚು ದೊಣ್ಣೆಗಳಿಂದ ಹೊಡೆದಾಡಿದ್ದಾರೆ.
ಎರಡು ಗುಂಪುಗಳಿಂದ ಆರು ಮಂದಿಗೆ ಗಾಯವಾಗಿದೆ ಎಂದು ಹೇಳಲಾಗಿದೆ.
ಗಂಭೀರ ಗಾಯಗೊಂಡವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.
ಘಟನೆ ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ರಘು ವೃತ್ತ ನಿರೀಕ್ಷಕ ರವೀಂದ್ರ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ…