ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಪರಿಶೀಲನೆ.
- TV10 Kannada Exclusive
- May 15, 2026
- No Comment
- 9

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಪರಿಶೀಲನೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್ಗೆ ಬದಲಾಯಿಸುವ ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪರಿಶೀಲಿಸಿದರು.
ಮೈಸೂರಿನ ಶ್ರೀರಾಂಪುರದಲ್ಲಿ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್ಗೆ ಬದಲಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆಸ್ಕ್ ಅಧಿಕಾರಿಗಳಿಂದ ಕಾಮಗಾರಿಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸೆಸ್ಕ್ನ ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಅವರು, ಮೈಸೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭೂಗತ ಕೇಬಲ್ ಅಳವಡಿಸುವ ಕಾಮಗಾರಿಯ ಪ್ರಗತಿ ಕುರಿತಂತೆ ಮಾಹಿತಿ ನೀಡಿದರು. ಹಾಗೂ ಕಾಮಗಾರಿ ಮುಗಿಸಲು 2 ವರ್ಷ ಅವಧಿ ನಿಗದಿಪಡಿಸಿದ್ದು, ನಿಗದಿತ ವೇಳೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ, ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಟಿ.ಎಸ್. ಶ್ರೀವತ್ಸ, ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಾದೇಶಿಕ ಆಯುಕ್ತರು ಹಾಗೂ ಸೆಸ್ಕ್ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ನಿತೀಶ್ ಪಾಟೀಲ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಸೆಸ್ಕ್ನ ಮುಖ್ಯ ಇಂಜಿನಿಯರ್ ಎಲ್. ಲೋಕೇಶ್ ಸೇರಿದಂತೆ ಇತರರಿದ್ದರು.