ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

  • Crime
  • May 26, 2026
  • No Comment
  • 162

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ನಂಜನಗೂಡು,ಮೇ26,Tv10 ಕನ್ನಡ

ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ನಂಜನಗೂಡು ತಾಲೂಕು ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ನಾಪತ್ತೆಯಾದ ಸ್ಥಳದಲ್ಲಿ ಮನುಷ್ಯರು ಸೃಷ್ಟಿಸಿದ ಚಿರತೆ ಹೆಜ್ಜೆಯಂತಹ ಗುರುತು ಪತ್ತೆಯಾಗಿದೆ.ಮಹಿಳೆ ಅಪಹರಣವೋ ಅಥವಾ ಕಾಡುಪ್ರಾಣಿಗಳು ಎಳೆದೊಯ್ದಿರಬಹುದೇ ಎಂಬ ಆತಂಕ ಶುರುವಾಗಿದೆ.ಕುಟುಂಬಸ್ಥರು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

ಶಿವರುದ್ರಮ್ಮ (63) ನಿಗೂಢವಾಗಿ ನಾಪತ್ತೆಯಾದ ಮಹಿಳೆ.ನಿನ್ನೆ ಜಮೀನಿಗೆ ಎಂದು ಮನೆ ಬಿಟ್ಟ ಶಿವರುದ್ರಮ್ಮ ಮತ್ತೆ ಹಿಂದಿರುಗಿಲ್ಲ.ತಡರಾತ್ರಿ ಆದ್ರೂ ಮನೆಗೆ ಹಿಂದಿರುಗದ ಹಿನ್ನಲೆ ಕುಟುಂಬಸ್ಥರು ಆತಂಕಗೊಂಡು ನಂಜನಗೂಡು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ.ಸ್ಥಳ ಪರಿಶೀಲನೆ ನಡೆಸಿದಾಗ ಶಿವರುದ್ರಮ್ಮ ತೆರಳಿದ್ದ ಜಮೀನು ಬಳಿ ಮನುಷ್ಯರು ಬೆರಳಿನಿಂದ ಸೃಷ್ಟಿಸಿದ ಚಿರತೆ ಹೆಜ್ಜೆಯಂತಹ ಗುರುತು ಪತ್ತೆಯಾಗಿದೆ.ಅಲ್ಲದೆ ಶಿವರುದ್ರಮ್ಮ ರವರ ಚಪ್ಪಲಿಗಳು ಅನಾಥವಾಗಿ ಬಿದ್ದಿವೆ.ಕಾಡುಪ್ರಾಣಿಗಳು ಎಳೆದೊಯ್ದಿರಬಹುದೆಂಬ ಶಂಕೆಯಿಂದ ಅರಣ್ಯ ಇಲಾಖೆ ಸಹ ಶೋಧನೆ ನಡೆಸಿದ್ದಾರೆ.ಕೃತಕ ಚಿರತೆ ಹೆಜ್ಜೆ ಗುರುತು ಹೊರತುಪಡಿಸಿದರೆ ಎಳೆದೊಯ್ದಿರುವ ಇನ್ಯಾವುದೇ ಕುರುಹುಗಳು ಕಂಡು ಬಂದಿಲ್ಲ.ಶಿವರುದ್ರಮ್ಮ 60 ಗ್ರ ಚಿನ್ನದ ಸರ ಹಾಗೂ 10 ಗ್ರಾಂ ಕಿವಿ ಓಲೆಗಳು ಧರಿಸಿದ್ದರೆಂದು ಹೇಳಲಾಗಿದೆ.ಶಿವರುದ್ರಮ್ಮ ನಾಪತ್ತೆ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ತಲೆನೋವು ತಂದಿದೆ.ಕಿಡಿಗೇಡಿಗಳ ಕೃತ್ಯವೋ ಅಥವಾ ಕಾಡುಪ್ರಾಣಿಗಳು ಎಳೆದೊಯ್ದಿದೆಯೋ ಗೊತ್ತಿಲ್ಲ.ಸಧ್ಯ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಶಿವರುದ್ರಮ್ಮ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *