ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ನಂಜನಗೂಡು,ಜೂ7,Tv10 ಕನ್ನಡ

ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ ಖಾಲಿ ಕಚೇರಿ ನೋಡಿ ಬೇಸತ್ತು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ನಂಜನಗೂಡು ತಾಲೂಕು ಹಾಡ್ಯ ಗ್ರಾಮ ಪಂಚಾಯ್ತಿ ಕಾರ್ಯಾಲಯದ ದುಃಸ್ಥಿತಿ ಇದು.ಕಳೆದ ಹತ್ತಾರು ವರ್ಷಗಳಿಂದ ಈ ಗ್ರಾಮ ಪಂಚಾಯ್ತಿಗೆ ಬರುವ ಯಾವುದೇ ಸಿಬ್ಬಂದಿಯಾಗಲಿ ಅಧಿಕಾರಿಯಾಗಲಿ 6 ತಿಂಗಳ ಮೇಲೆ ಕರ್ತವ್ಯ ನಿರ್ವಹಿಸಲಿಲ್ಲ.ಇಲ್ಲಿಗೆ ನಿಯೋಜನೆಗೊಂಡ ಕೆಲವೇ ದಿನಗಳಲ್ಲಿ ವರ್ಗಾವಣೆ ಮಾಡಿಸಿಕೊಂಡು ಖಾಲಿಯಾಗುತ್ತಾರೆ.ಇರುವಷ್ಟು ದಿನ ಕಚೇರಿಯತ್ತ ಸುಳಿಯುವುದೂ ಇಲ್ಲ.ಇಲ್ಲಿಗೆ ಭೇಟಿ ನೀಡುವ ಮಂದಿಗೆ ಕಾಣಿಸುವುದು ಕೇವಲ ಅಟೆಂಡರ್ ಮಾತ್ರ.2012-13 ರ ಸಾಲಿನಲ್ಲಿ ಬೆಳಕಿಗೆ ಬಂದ ಹಗರಣವೊಂದು ಇಡೀ ಗ್ರಾಮ ಪಂಚಾಯ್ತಿ ಮೇಲೆ ಪರಿಣಾಮ ಬೀರಿದೆ.ಈ ಘಟನೆ ನಡೆದ ನಂತರ ಯಾವ ಅಧಿಕಾರಿ ಸಿಬ್ಬಂದಿಯಾಗಲಿ ಇಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸುತ್ತಿಲ್ಲ.ಹೀಗಾಗಿ ಸಾರ್ವಜನಿಕರು ಭೇಟಿ ನೀಡಿದ್ರೆ ಕಚೇರಿ ಖಾಲಿ ಖಾಲಿ ಕಾಣಿಸುತ್ತದೆ.ಸಿಬ್ಬಂದಿಗಳ ಅನುಪಸ್ಥಿತಿ ಇದ್ದರೂ ಅನುದಾನಗಳು ಮಾತ್ರ ಸಮರ್ಪಕವಾಗಿ ಬಳಕೆಯಾಗುತ್ತಿರುವುದು ಮಾತ್ರ ಸೋಜಿಗ.ಇನ್ನು ಈ ಕಟ್ಟಡವಂತೂ ಭೀತಿ ಹುಟ್ಟಿಸುತ್ತದೆ.ನೀರಿನ ವ್ಯವಸ್ಥೆ ಇಲ್ಲ.ಮಳೆ ಬಂದರಂತೂ ಎಡವಟ್ಟು ಜಾಸ್ತಿ.ಅಧಿಕಾರಿ ಸಿಬ್ಬಂದಿಗಳಿಗೆ ಈ ಕಚೇರಿ ಶಾಪಗ್ರಸ್ತವೆಂದೇ ಹೇಳಲಾಗುತ್ತಿದೆ.ಸಿಬ್ಬಂದಿಗಳ ವರ್ತನೆ ಸ್ಥಳೀಯರ ಸಂಯಮವನ್ನ ಕೆಣಕಿದೆ.ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ವ್ಯವಸ್ಥೆ ಮಾಡದಿದ್ದಲ್ಲಿ ಪ್ರತಿಭಟನೆ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *