ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ನಂಜನಗೂಡು,ಜೂ7,Tv10 ಕನ್ನಡ

ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ ಖಾಲಿ ಕಚೇರಿ ನೋಡಿ ಬೇಸತ್ತು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ನಂಜನಗೂಡು ತಾಲೂಕು ಹಾಡ್ಯ ಗ್ರಾಮ ಪಂಚಾಯ್ತಿ ಕಾರ್ಯಾಲಯದ ದುಃಸ್ಥಿತಿ ಇದು.ಕಳೆದ ಹತ್ತಾರು ವರ್ಷಗಳಿಂದ ಈ ಗ್ರಾಮ ಪಂಚಾಯ್ತಿಗೆ ಬರುವ ಯಾವುದೇ ಸಿಬ್ಬಂದಿಯಾಗಲಿ ಅಧಿಕಾರಿಯಾಗಲಿ 6 ತಿಂಗಳ ಮೇಲೆ ಕರ್ತವ್ಯ ನಿರ್ವಹಿಸಲಿಲ್ಲ.ಇಲ್ಲಿಗೆ ನಿಯೋಜನೆಗೊಂಡ ಕೆಲವೇ ದಿನಗಳಲ್ಲಿ ವರ್ಗಾವಣೆ ಮಾಡಿಸಿಕೊಂಡು ಖಾಲಿಯಾಗುತ್ತಾರೆ.ಇರುವಷ್ಟು ದಿನ ಕಚೇರಿಯತ್ತ ಸುಳಿಯುವುದೂ ಇಲ್ಲ.ಇಲ್ಲಿಗೆ ಭೇಟಿ ನೀಡುವ ಮಂದಿಗೆ ಕಾಣಿಸುವುದು ಕೇವಲ ಅಟೆಂಡರ್ ಮಾತ್ರ.2012-13 ರ ಸಾಲಿನಲ್ಲಿ ಬೆಳಕಿಗೆ ಬಂದ ಹಗರಣವೊಂದು ಇಡೀ ಗ್ರಾಮ ಪಂಚಾಯ್ತಿ ಮೇಲೆ ಪರಿಣಾಮ ಬೀರಿದೆ.ಈ ಘಟನೆ ನಡೆದ ನಂತರ ಯಾವ ಅಧಿಕಾರಿ ಸಿಬ್ಬಂದಿಯಾಗಲಿ ಇಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸುತ್ತಿಲ್ಲ.ಹೀಗಾಗಿ ಸಾರ್ವಜನಿಕರು ಭೇಟಿ ನೀಡಿದ್ರೆ ಕಚೇರಿ ಖಾಲಿ ಖಾಲಿ ಕಾಣಿಸುತ್ತದೆ.ಸಿಬ್ಬಂದಿಗಳ ಅನುಪಸ್ಥಿತಿ ಇದ್ದರೂ ಅನುದಾನಗಳು ಮಾತ್ರ ಸಮರ್ಪಕವಾಗಿ ಬಳಕೆಯಾಗುತ್ತಿರುವುದು ಮಾತ್ರ ಸೋಜಿಗ.ಇನ್ನು ಈ ಕಟ್ಟಡವಂತೂ ಭೀತಿ ಹುಟ್ಟಿಸುತ್ತದೆ.ನೀರಿನ ವ್ಯವಸ್ಥೆ ಇಲ್ಲ.ಮಳೆ ಬಂದರಂತೂ ಎಡವಟ್ಟು ಜಾಸ್ತಿ.ಅಧಿಕಾರಿ ಸಿಬ್ಬಂದಿಗಳಿಗೆ ಈ ಕಚೇರಿ ಶಾಪಗ್ರಸ್ತವೆಂದೇ ಹೇಳಲಾಗುತ್ತಿದೆ.ಸಿಬ್ಬಂದಿಗಳ ವರ್ತನೆ ಸ್ಥಳೀಯರ ಸಂಯಮವನ್ನ ಕೆಣಕಿದೆ.ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ವ್ಯವಸ್ಥೆ ಮಾಡದಿದ್ದಲ್ಲಿ ಪ್ರತಿಭಟನೆ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *