ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

  • Crime
  • June 30, 2026
  • No Comment
  • 59

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರು,ಜೂ30,Tv10 ಕನ್ನಡ

ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ.ವಿವಾಹಿತೆ ನೀಡಿದ ಮಾಹಿತಿ ಆಧಾರದ ಮೇಲೆ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತ್ರಸ್ಥೆಯನ್ನ ರಕ್ಷಣೆ ಮಾಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಆಲನಹಳ್ಳಿ ಠಾಣೆ ಪೊಲೀಸರು ಮೂವರನ್ನ ಬಂಧಿಸಿ ಕಂಬಿ ಎಣಿಸಲು ಕಳಿಸಿದ್ದಾರೆ.

ಆಲನಹಳ್ಳಿಯ ಶಿವಕುಮಾರ್ ಎಂಬುವರ ಪತ್ನಿ ಭವ್ಯ (19) ಎಂಬುವರೇ ಅಪಹರಣಕ್ಕೆ ಒಳಗಾದವರು.ರಾಮನಗರದ ಸುಮ,ಕಿರಣ್ ಹಾಗೂ ಮತ್ತೊಬ್ಬ ಮಹಿಳೆ ಅಪಹರಿಸಿದ ಆರೋಪದ ಹಿನ್ನಲೆ ಅರೆಸ್ಟ್ ಆದವರು.ಎಲೆಕ್ಟ್ರಿಷಿಯನ್ ಕೆಲಸ ಮಾಡುವ ಶಿವಕುಮಾರ್ ಒಂದು ವರ್ಷದ ಹಿಂದೆ ಹಾಸನ ಜಿಲ್ಲೆ ಸಕಲೇಶಪುರದ ಭವ್ಯ ರನ್ನ ಪ್ರೀತಿಸಿ ಮದುವೆ ಆಗಿದ್ದು ಆಲನಹಳ್ಳಿಯಲ್ಲಿ ವಾಸವಿದ್ದಾರೆ.ಜೂನ್ 25 ರಂದು ಶಿವಕುಮಾರ್ ರವರು ಕೆಲಸದ ನಿಮಿತ್ತ ಬೋಗಾದಿಗೆ ತೆರಳಿದ್ದರು.ಪತ್ನಿಯನ್ನ ಮಾತನಾಡಿಸಲು ಫೋನ್ ಮಾಡಿದಾಗ ಸ್ವಿಚ್ ಆಫ್ ಬಂದಿದೆ.ದೇವಸ್ಥಾನಕ್ಕೆ ಹೋಗಿರಬಹುದೆಂದು ಸುಮ್ಮನಾಗಿದ್ದಾರೆ.ರಾತ್ರಿಯಾದರೂ ಪತ್ನಿ ಮನೆಗೆ ಹಿಂದಿರುಗದ ಹಿನ್ನಲೆ ಆತಂಕದಲ್ಲಿದ್ದ ಶಿವಕುಮಾರ್ ಗೆ ಮರುದಿನ ಕರೆ ಬಂದಿದೆ.ಪತ್ನಿಯೇ ಮಾತನಾಡಿ ನನ್ನನ್ನ ಮೂವರು ವ್ಯಕ್ತಿಗಳು ರಾಮನಗರಕ್ಕೆ ಕರೆತಂದು ಮನೆಯೊಂದರಲ್ಲಿ ಬಂಧಿಸಿದ್ದಾರೆ ರಕ್ಷಣೆ ಮಾಡಿ ಎಂದು ಮಾಹಿತಿ ನೀಡಿ ಲೊಕೇಶನ್ ಕಳಿಸಿದ್ದಾರೆ.ಕೂಡಲೇ ಶಿವಕುಮಾರ್ 112 ಗೆ ಸಂಪರ್ಕಿಸಿ ಸಂಪೂರ್ಣ ಮಾಹಿತಿ ನೀಡಿ ಪತ್ನಿ ಕಳಿಸಿದ ಲೊಕೇಶನ್ ಕೊಟ್ಟಿದ್ದಾರೆ.ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಭವ್ಯರನ್ನ ರಕ್ಷಿಸಿದ್ದಾರೆ.ರಾಮನಗರಕ್ಕೆ ತೆರಳಿದ ಶಿವಕುಮಾರ್ ಪತ್ನಿಯನ್ನ ಸುರಕ್ಷಿತವಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ.ಭವ್ಯರನ್ನ ಮನೆಯಿಂದ ಕರೆದೊಯ್ದ ಹಿನ್ನಲೆ ಶಿವಕುಮಾರ್ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸುಮ,ಕಿರಣ್ ಹಾಗೂ ಮತ್ತೊಂದು ಲೇಡಿಯನ್ನ ಅರೆಸ್ಟ್ ಮಾಡಿ ಜೈಲಿಗೆ ಕಳಿಸಿದ್ದಾರೆ…

Spread the love

Related post

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…

Leave a Reply

Your email address will not be published. Required fields are marked *