ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ
- TV10 Kannada Exclusive
- June 30, 2026
- No Comment
- 10
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ನಂಜನಗೂಡಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್, ಶಿಕ್ಷಣ ಕ್ಷೇತ್ರದಲ್ಲಿ ಎಚ್.ವಿ. ರಾಘವೇಂದ್ರ ಅವರು ಸಲ್ಲಿಸಿರುವ ಸೇವೆ ಅತ್ಯಂತ ಶ್ಲಾಘನೀಯವಾಗಿದೆ. ತಮ್ಮ ಪ್ರಾಮಾಣಿಕತೆ, ಶಿಸ್ತು, ಕಾರ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯತ್ತ ತೋರಿದ ಕಾಳಜಿಯಿಂದ ಎಲ್ಲರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ಕಲ್ಯಾಣಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಟಿ.ಸಿ. ಶಾಂತರಾಜು ಮಾತನಾಡಿ, ಶಿಕ್ಷಣ ಸೇವೆಯಲ್ಲಿ ಹಲವು ವರ್ಷಗಳ ಕಾಲ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸಿದ ರಾಘವೇಂದ್ರ ಅವರು ನಿವೃತ್ತಿಯ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯುವಪೀಳಿಗೆಗೆ ಮಾರ್ಗದರ್ಶನ ನೀಡಲಿ ಎಂದು ಹಾರೈಸಿದರು.