ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…
- Crime
- July 7, 2026
- No Comment
- 6



ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…
ಮಂಡ್ಯ,ಆ7,Tv10 ಕನ್ನಡ
ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.
ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಅರಳೀಮರ ಬಸ್ ಸ್ಟಾಪ್ ಬಳಿ ಘಟನೆ ನಡೆದಿದೆ.
ಪೊಲೀಸ್ ಠಾಣೆಯ ಕೂಗೆಳೆ ದೂರದಲ್ಲೇ ಕೃತ್ಯ ನಡೆದಿದೆ.
ರಾಕೇಶ್ (28) ಕೊಲೆಯಾದ ಯುವಕ.
ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದ ಯುವಕ.
ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ರಾತ್ರಿ ಕೊಲೆ ಆಗಿದ್ದಾನೆ.
ಸ್ಥಳದಲ್ಲಿ ಯುವಕನ ಬೈಕ್ ಪತ್ತೆಯಾಗಿದೆ.
ಸ್ಥಳಕ್ಕೆ ಎಸ್ಪಿ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹಂತಕರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.ಕೆ ಆರ್ ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…