ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಮೈಸೂರು,ಜುಲೈ11,Tv10 ಕನ್ನಡ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಅಪ್ರತಿಮ ಗಾಯನದ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದ ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಕುಲಪತಿ ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿ ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದ ಎಸ್. ಜಾನಕಿ ಅವರ ಅಗಲಿಕೆ ನಮ್ಮೆಲ್ಲರಿಗೂ ಅಪಾರ ನೋವು ತಂದಿದೆ. ಅವರ ಕಂಠಸಿರಿ, ಗಾಯನ ವೈಭವ ಮತ್ತು ಸಂಗೀತ ಪರಂಪರೆ ಮುಂದಿನ ಪೀಳಿಗೆಗಳಿಗೂ ತಲುಪಬೇಕು.ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ‘ಎಸ್. ಜಾನಕಿ ಸ್ಮಾರಕ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ’ ಸ್ಥಾಪಿಸುವ ಕುರಿತು ಗಂಭೀರ ಚಿಂತನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಜಾನಕಿ ಅವರು ಕೇವಲ ಗಾಯಕಿಯಷ್ಟೇ ಅಲ್ಲ, ಭಾರತೀಯ ಸಂಗೀತ ಲೋಕದ ಅಮೂಲ್ಯ ಸಾಂಸ್ಕೃತಿಕ ಸಂಪತ್ತಾಗಿದ್ದರು. ಅವರ ಸಾವಿರಾರು ಹಾಡುಗಳು ಭಾಷೆ, ಕಾಲ ಮತ್ತು ತಲೆಮಾರುಗಳ ಗಡಿಗಳನ್ನು ಮೀರಿ ಸಂಗೀತ ಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿವೆ. ಕನ್ನಡ ಚಿತ್ರರಂಗದ ಸುವರ್ಣಯುಗದ ಅನೇಕ ಅಮರ ಗೀತೆಗಳಿಗೆ ಅವರು ತಮ್ಮ ಕಂಠದ ಮೂಲಕ ಜೀವ ತುಂಬಿದ್ದರು ಎಂದು ಸ್ಮರಿಸಿದ್ದಾರೆ.

ಪ್ರಸ್ತಾವಿತ ಕೇಂದ್ರದಲ್ಲಿ ಜಾನಕಿ ಅವರ ಅಪರೂಪದ ಹಾಡುಗಳು, ಸಂದರ್ಶನಗಳು, ಧ್ವನಿಮುದ್ರಣಗಳು, ಸಂಗೀತ ದಾಖಲೆಗಳು ಹಾಗೂ ಸಂಶೋಧನಾ ಸಾಮಗ್ರಿಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಸಂರಕ್ಷಿಸುವ ಯೋಜನೆ ರೂಪಿಸಲಾಗುವುದು. ಜೊತೆಗೆ ಸಂಗೀತ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಯುವ ಗಾಯಕ-ಗಾಯಕಿಯರಿಗೆ ಅಧ್ಯಯನ ಮತ್ತು ಸಂಶೋಧನೆಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರವನ್ನು ಅಭಿವೃದ್ಧಿಪಡಿಸುವ ಉದ್ದೇಶವೂ ಇದೆ ಎಂದು ಹೇಳಿದ್ದಾರೆ.

ಎಸ್.ಜಾನಕಿ ಅವರ ಗಾಯನ ಪರಂಪರೆಯನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ. ಅವರ ಧ್ವನಿ ಎಂದೆಂದಿಗೂ ಅಮರವಾಗಿರಲಿದೆ” ಎಂದು ಪ್ರೊ. ಜ್ಞಾನ ಪ್ರಕಾಶ್ ನುಡಿನಮನ ಸಲ್ಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *