ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಮೈಸೂರು,ಜುಲೈ11,Tv10 ಕನ್ನಡ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಅಪ್ರತಿಮ ಗಾಯನದ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದ ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಕುಲಪತಿ ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿ ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದ ಎಸ್. ಜಾನಕಿ ಅವರ ಅಗಲಿಕೆ ನಮ್ಮೆಲ್ಲರಿಗೂ ಅಪಾರ ನೋವು ತಂದಿದೆ. ಅವರ ಕಂಠಸಿರಿ, ಗಾಯನ ವೈಭವ ಮತ್ತು ಸಂಗೀತ ಪರಂಪರೆ ಮುಂದಿನ ಪೀಳಿಗೆಗಳಿಗೂ ತಲುಪಬೇಕು.ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ‘ಎಸ್. ಜಾನಕಿ ಸ್ಮಾರಕ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ’ ಸ್ಥಾಪಿಸುವ ಕುರಿತು ಗಂಭೀರ ಚಿಂತನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಜಾನಕಿ ಅವರು ಕೇವಲ ಗಾಯಕಿಯಷ್ಟೇ ಅಲ್ಲ, ಭಾರತೀಯ ಸಂಗೀತ ಲೋಕದ ಅಮೂಲ್ಯ ಸಾಂಸ್ಕೃತಿಕ ಸಂಪತ್ತಾಗಿದ್ದರು. ಅವರ ಸಾವಿರಾರು ಹಾಡುಗಳು ಭಾಷೆ, ಕಾಲ ಮತ್ತು ತಲೆಮಾರುಗಳ ಗಡಿಗಳನ್ನು ಮೀರಿ ಸಂಗೀತ ಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿವೆ. ಕನ್ನಡ ಚಿತ್ರರಂಗದ ಸುವರ್ಣಯುಗದ ಅನೇಕ ಅಮರ ಗೀತೆಗಳಿಗೆ ಅವರು ತಮ್ಮ ಕಂಠದ ಮೂಲಕ ಜೀವ ತುಂಬಿದ್ದರು ಎಂದು ಸ್ಮರಿಸಿದ್ದಾರೆ.

ಪ್ರಸ್ತಾವಿತ ಕೇಂದ್ರದಲ್ಲಿ ಜಾನಕಿ ಅವರ ಅಪರೂಪದ ಹಾಡುಗಳು, ಸಂದರ್ಶನಗಳು, ಧ್ವನಿಮುದ್ರಣಗಳು, ಸಂಗೀತ ದಾಖಲೆಗಳು ಹಾಗೂ ಸಂಶೋಧನಾ ಸಾಮಗ್ರಿಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಸಂರಕ್ಷಿಸುವ ಯೋಜನೆ ರೂಪಿಸಲಾಗುವುದು. ಜೊತೆಗೆ ಸಂಗೀತ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಯುವ ಗಾಯಕ-ಗಾಯಕಿಯರಿಗೆ ಅಧ್ಯಯನ ಮತ್ತು ಸಂಶೋಧನೆಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರವನ್ನು ಅಭಿವೃದ್ಧಿಪಡಿಸುವ ಉದ್ದೇಶವೂ ಇದೆ ಎಂದು ಹೇಳಿದ್ದಾರೆ.

ಎಸ್.ಜಾನಕಿ ಅವರ ಗಾಯನ ಪರಂಪರೆಯನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ. ಅವರ ಧ್ವನಿ ಎಂದೆಂದಿಗೂ ಅಮರವಾಗಿರಲಿದೆ” ಎಂದು ಪ್ರೊ. ಜ್ಞಾನ ಪ್ರಕಾಶ್ ನುಡಿನಮನ ಸಲ್ಲಿಸಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *