ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…
- Crime
- August 17, 2026
- No Comment
- 32
ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…




ಚಾಮರಾಜನಗರ,ಆ17,Tv10 ಕನ್ನಡ
ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ ಪುರಾವೆ ನೀಡಿದೆ.ಗುಂಡಿನ ದಾಳಿ ನಡೆದ ಸ್ಥಳದಲ್ಲಿ 2 ರೈಫಲ್, 2 ಚೀಲ ಜಿಂಕೆ ಮಾಂಸ ಪತ್ತೆಯಾಗಿರುವ ಕುರಿತು ತನಿಖಾಧಿಕಾರಿಗೆ ವರದಿ ಸಲ್ಲಿಸಿದೆ.
ಹೆಡ್ಟಾರ್ಚ್, ಡ್ರಗ್ಸ್ ಪೌಡರ್, ಗುಂಡುಗಳು, ಪಾತ್ರೆಗಳು, ಚಪ್ಪಲಿ, ಚಾಕು ಸೇರಿದಂತೆ ಹಲವು ವಸ್ತುಗಳ ಫೋಟೋ ಬಿಡುಗಡೆ ಮಾಡಿದೆ.ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಎರಡು ದಿನ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಕೆಲವು ಸಾಕ್ಷ್ಯಗಳು ದೊರೆತಿವೆ.
ಕೊಳ್ಳೇಗಾಲ ಎಸಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆದಿದೆ.
ಅರಣ್ಯ ಇಲಾಖೆ ಹಾಗೂ ಮೃತರ ಕುಟುಂಬಸ್ಥರು ಮಾಡಿರುವ ಆರೋಪಗಳ ಕುರಿತು ಎರಡೂ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.ಶವಪರೀಕ್ಷೆ ವರದಿ ಬಂದ ಬಳಿಕ ಕೊಳ್ಳೇಗಾಕ ಉಪ ವಿಭಾಗಾಧಿಕಾರಿಗಳು ಸಂಪೂರ್ಣ ವರದಿ ಸಲ್ಲಿಸಲಿದ್ದಾರೆ.
ತನಿಖೆ ಪೂರ್ಣಗೊಂಡ ನಂತರ ಘಟನೆಯ ಸತ್ಯಾಸತ್ಯತೆ ಹೊರಬರಲಿದೆ…