50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…
- TV10 Kannada Exclusive
- August 19, 2026
- No Comment
- 7


50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…
ಮೈಸೂರು,ಆ19,Tv10 ಕನ್ನಡ
14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ ಎಲ್ಲಾ ಆದೇಶಗಳನ್ನ ಸರ್ಕಾರ ರದ್ದುಪಡಿಸಿದೆ.ಏಕಸದಸ್ಯ ವಿಚಾರಣಾ ವರದಿಯ ಶಿಫಾರಸ್ಸಿನಂತೆ ಉನ್ನತಮಟ್ಟದ ತಾಂತ್ರಿಕ ಸಮಿತಿ ನೀಡಿರುವ ವರದಿಯನ್ವಯ ತಕ್ಷಣ ಜಾರಿಗೆ ಬರುವಂತೆ ರದ್ದುಪಡಿಸಿದ ಆದೇಶ ಹೊರಡಿಸಲಾಗಿದೆ.ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ರವರು ಆದೇಶ ಹೊರಡಿಸಿ ತಕ್ಷಣ ಜಾರಿಗೆ ತಂದು ಅನುಪಾಲನಾ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಎಲ್ಲಾ ಸಂಸ್ಥೆಗಳಿಗೆ ಆದೇಶಿಸಲಾಗಿದೆ.
14-03-2023 ರ ನಿರ್ದೇಶನ ಉಲ್ಲಂಘಿಸಿ ಬದಲಿ ನಿವೇಶನ ಹಂಚಿಕೆ ಮಾಡಿರುವ ಆದೇಶ ರದ್ದುಪಡಿಸುವುದು
ಈಗಾಗಲೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಣಿ ಆಗಿರುವ ನಿವೇಶನಗಳ ಕ್ರಯಪತ್ರ ರದ್ದುಪಡಿಸಲು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಲು ಕ್ರಮವಹಿಸುವುದು
ಕ್ರಯಪತ್ರ ಆಗದೇ ಇದ್ದಲ್ಲಿ ಸರ್ಕಾರದಿಂದ ಮಾರ್ಗಸೂಚಿ ರಚನೆಯಾಗಿ ಸೂಕ್ತ ನಿರ್ದೇಶನ ನೀಡುವವರೆಗೂ ಪ್ರಾಧಿಕಾರದಿಂದ ಇಂತಹ ಪ್ರಕರಣಗಳಿಗೆ ಕ್ರಯಪತ್ರ ನೀಡಬಾರದು
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಣಿಯಾಗಿದ್ದರೆ ಅವುಗಳಿಗೆ ಖಾತಾ ಮಾಡುವುದನ್ನ ತಡೆಹಿಡಿದು ಸಂಬಂಧಪಟ್ಟ ಸಂಸ್ಥೆಗಳಿಗೆ ನಿರ್ದೇಶನ ನೀಡುವುದು
ಖಾತೆ ಆಗಿದ್ದರೂ ಕರ್ನಾಟಕ ನಗರ ಪಾಲಿಕೆ ಕಾಯ್ದೆ 1976,ಕರ್ನಾಟಕ ಮುನ್ಸಿಪಲ್ ಕಾಯ್ದೆ 1961 ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ 1993 ಅಡಿ ನಿಯಮಾನುಸಾರ ರದ್ದುಪಡಿಸಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಆದೇಶ ಹೊರಡಿಸಲಾಗಿದೆ…