*ಕಾರ್ಗಿಲ್ ವಿಜಯೋತ್ಸವ ಆಚರಣೆ…ನಿವೃತ್ತ ಯೋಧರಿಗೆ ಸನ್ಮಾನ…*

*ಮೈಸೂರು,ಜುಲೈ25,Tv10 ಕನ್ನಡ*
23 ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ
ಇಂದು ಯುವ ಭಾರತ್ ಸಂಘಟನೆ ವತಿಯಿಂದ ಯೋಧರ ಒಂದು ನೆನಪು ಹಾಗೂ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ನಿವೃತ್ತ 6 ಜನ ವೀರ. ಯೋಧರಿಗೆ ಸನ್ಮಾನವನ್ನು ಮಾಡಲಾಯಿತು.
ಸನ್ಮಾನ ಸ್ವೀಕರಿಸಿದ 20ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ ನಿವೃತ್ತ ವೀರ ಯೋಧರಾದ
ಎಂ ವಿ ಕುಮಾರ್
ವಿರುಪಾಕ್ಷಪ್ಪ
ಕೆ ವಿ ಮಹೇಶ್
ಕೆ ಪಿ ಮಹೇಶ್
ಕಾಂತರಾಜು ಬಿ
ಮಂಜು ಸಿ
ಅವರನ್ನ ಸನ್ಮಾನಿಸಿ ಅಭಿನಂದಿಸಲಾಯಿತು.
ನಂತರ ಮಾತನಾಡಿದ ಶಾಸಕರಾದ ಎಲ್ ನಾಗೇಂದ್ರ ರವರು ಭಾರತ ದೇಶದ ಕಾರ್ಗಿಲ್ ಯುದ್ದವು ಇಡೀ ಪ್ರಪಂಚವೇ ಎದುರು ನೋಡುತ್ತಿದ್ದ ಯುದ್ಧ. ಕಾಶ್ಮೀರದಿಂದ ಭಾರತಕ್ಕೆ ಸಂಪರ್ಕವನ್ನ ಕಲ್ಪಿಸುವ ಹೈವೇಯನ್ನು ತನ್ನ ಮುಷ್ಟಿಯಲ್ಲಿ ಇಟ್ಟಿಕೊಳ್ಳುವ ಭರದಲ್ಲಿ ಪಾಕಿಸ್ತಾನದ ಯೋಧರು ಮತ್ತು ಉಗ್ರಗಾಮಿಗಳು ಭಾರತದ ಸಿಯಾಚಿನ್ ಗಡಿರೇಖೆಯನ್ನು ನುಗ್ಗಿ ಭಾರತದ ಕೆಲವು ಪ್ರದೇಶವನ್ನ ಆಕ್ರಮಿಸಿಕೊಂಡಿದ್ದರು. ಅ ಸಂದರ್ಭದಲ್ಲಿ ಅಂದಿನ ಪ್ರದಾನ ಮಂತ್ರಿ ವಾಜಪೇಯಿ ರವರ ಆದೇಶದ ಮೇರೆಗೆ ಯುದ್ಧ ಪ್ರಾರಂಭವಾಯಿತು. ಬೆಟ್ಟದ ಮೇಲೆ ಪಾಕಿಸ್ತಾನದ ಉಗ್ರಗಾಮಿಗಳು ಮತ್ತು ಕೆಳಭಾಗದಲ್ಲಿ ಯೋಧರ ಜೊತೆ ಯುದ್ಧ ನೆಡೆಯುವುದಿತ್ತು. ನಮ್ಮ ವೀರ ಯೋಧರು ಯುಧವನ್ನ ಗೆದ್ದು ಪ್ರಪಂಚಕ್ಕೆ ಭಾರತದ ಶಕ್ತಿಯನ್ನು ತೋರಿಸಿಕೊಟ್ಟರು.ಈ ದೇಶದ ಉಳಿವಿಗಾಗಿ ಸೈನಿಕರು ಹಗಲು ರಾತ್ರಿ ದುಡಿಯುತ್ತಿದ್ದಾರೆ ಹಾಗೇಯೆ 23 ವರ್ಷಗಳ ಹಿಂದೆ ನಡೆದ ಕಾರ್ಗಿಲ್ ಯುದ್ದವು ಇಂದಿನ ಯುವಕರಿಗೆ ಸ್ಪೂರ್ತಿ ಮತ್ತು ಯುದ್ದದಲ್ಲಿ ಮಡಿದ ಯೋಧ ಕುಟುಂಬಕ್ಕೆ ಸಾಂತ್ವನ ಹೇಳುವ ನಿಟ್ಟಿನಲ್ಲಿ ಮತ್ತು ಅವರಿಗೆ ಗೌರವ ಕೊಡುವ ನಿಟ್ಟಿನಲ್ಲಿ ನಾವೆಲ್ಲ ಭಾರತೀಯರು ಚೈನಾ ಪದಾರ್ಥಗಳ ಬಹಿಷ್ಕಾರ ಮಾಡುವ ಮೂಲಕ ಯೋಧರಿಗೆ ಸಮರ್ಪಿಸೊಣ ಎಂದರು.ಕಾರ್ಯಕ್ರಮದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ ,ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥರಾದ ಮಹೇಶ್ ಶೆಣೈ ,ಹಿಂದುಳಿದ ವರ್ಗಗಳ ಮೊರ್ಚಾ ಅಧ್ಯಕ್ಷ ಜೋಗಿ ಮಂಜು ,ಬಿಜೆಪಿ ಫಲಾನುಭವಿ ಪ್ರಕೋಷ್ಟ ಸಂಚಾಲಕ ಪರಮೇಶ್ ಗೌಡ ,ನಗರಪಾಲಿಕೆ ಸದಸ್ಯ ಜಗದೀಶ್ ,ಯುವ ಭಾರತ ಸಂಘಟನೆಯ ಸಂಚಾಲಕ ಆನಂದ್ ,ಚಾಮರಾಜ ಯುವಮೋರ್ಚಾ ಅಧ್ಯಕ್ಷ ಸಚಿನ್ ,ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ,ಅಜಯ್ ಶಾಸ್ತ್ರಿ ,
ಸಂದೀಪ್ ಸಿ ,ಮಾಜಿ ನಗರ ಪಾಲಿಕೆ ಸದಸ್ಯ ರಮೇಶ್ ,
ಅಪೂರ್ವ ಸುರೇಶ್ ,ಪಂಕಜ್ ,ಶರತ್ ,
ಶಿವು ,ಸುಚೀಂದ್ರ, ಚಕ್ರಪಾಣಿ ,
ರಂಗನಾಥ್, ಮಹದೇವಪ್ರಸಾದ್,,ರಾಜು,ಸಿದ್ದೇಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು…
Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *