ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು.
ತಾಲೂಕಿನ ಶಾಸಕ ಅ
ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಎಚ್.ಡಿ.ಕೋಟೆ ತಾಲೋಕಿನ 26ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಶೇಷ ಚೇತನರು ರುತ್ತು ಹಿರಿಯ ನಾಗರಿಕರಿಗಾಗಿ ಶಿಬಿರ ಅಯೋಜಿಸಲಾಗಿತ್ತು.
ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಕಾರ್ಯಕ್ರಮವೂ ಶಿಬಿರದ ಒಂದು ಭಾಗವಾಗಿತ್ತು.ಹೆಚ್.ಡಿ.ಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ
ಆಯೋಜಿಸಲಾಗಿತ್ತು.ಆದ್ರೆ ಸೌಲಭ್ಯ ಒದಗಿಸದೆ ಅಧಿಕಾರಿಗಳು ಆಕ್ರೋಷಕ್ಕೆ ತುತ್ತಾದರು.
ಇಕ್ಕಟ್ಟಾದ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ, ಸಮರ್ಪಕ ಆಸನಗಳ ವ್ಯವಸ್ಥೆ ಇರಲಿಲ್ಲ.
ಆಸನಗಳಿಲ್ಲದೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ನೆಲದಲ್ಲೇ ಕುಳಿತರು.ಇದೇ ವೇಳೆ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ಅವ್ಯವಸ್ಥೆ ಕಂಡು ಕಿಡಿ ಕಾರಿದರು.ಜಿಲ್ಲಾ ವಿಶೇಷ ಚೇತನರ ಇಲಾಖೆ ಉಪನಿರ್ದೇಶಕಿ ಮಾಲೀನಿ ಸೇರಿದಂತೆ ತಾಲೋಕು ಅಧಿಕಾರಿಗಳಿಗೆ ಶಾಸಕ ಚಳಿ ಬಿಡಿಸಿದರು. ಶಿಬಿರ ರದ್ದುಗೊಳಿಸಲು ಪಟ್ಟು ಹಿಡಿದರೂ ಬಳಿಕ ವಿಶೇಷ ಚೇತನರು ಹಿರಿಯ ನಾಗರೀಕರ ಅನುಕೂಲದ ಹಿನ್ನಲೆ ನಡೆಸಲು ಸಮ್ಮತಿಸಿದರು.
ವಿಶೇಚ ಚೇತನರನ್ನ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಇಲಾಖಾ ಸಿಬ್ಬಂಧಿಗಳ ಬಗ್ಗೆ ಆಕ್ರೋಷ ವ್ಯಕ್ತವಾಯಿತು.ಒಟ್ಟಾರೆ ಅವ್ಯವಸ್ಥೆಯಲ್ಲೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ತಪಾಸಣೆಗೆ ಒಳಗಾದರು…
Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *