ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು.
ತಾಲೂಕಿನ ಶಾಸಕ ಅ
ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಎಚ್.ಡಿ.ಕೋಟೆ ತಾಲೋಕಿನ 26ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಶೇಷ ಚೇತನರು ರುತ್ತು ಹಿರಿಯ ನಾಗರಿಕರಿಗಾಗಿ ಶಿಬಿರ ಅಯೋಜಿಸಲಾಗಿತ್ತು.
ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಕಾರ್ಯಕ್ರಮವೂ ಶಿಬಿರದ ಒಂದು ಭಾಗವಾಗಿತ್ತು.ಹೆಚ್.ಡಿ.ಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ
ಆಯೋಜಿಸಲಾಗಿತ್ತು.ಆದ್ರೆ ಸೌಲಭ್ಯ ಒದಗಿಸದೆ ಅಧಿಕಾರಿಗಳು ಆಕ್ರೋಷಕ್ಕೆ ತುತ್ತಾದರು.
ಇಕ್ಕಟ್ಟಾದ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ, ಸಮರ್ಪಕ ಆಸನಗಳ ವ್ಯವಸ್ಥೆ ಇರಲಿಲ್ಲ.
ಆಸನಗಳಿಲ್ಲದೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ನೆಲದಲ್ಲೇ ಕುಳಿತರು.ಇದೇ ವೇಳೆ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ಅವ್ಯವಸ್ಥೆ ಕಂಡು ಕಿಡಿ ಕಾರಿದರು.ಜಿಲ್ಲಾ ವಿಶೇಷ ಚೇತನರ ಇಲಾಖೆ ಉಪನಿರ್ದೇಶಕಿ ಮಾಲೀನಿ ಸೇರಿದಂತೆ ತಾಲೋಕು ಅಧಿಕಾರಿಗಳಿಗೆ ಶಾಸಕ ಚಳಿ ಬಿಡಿಸಿದರು. ಶಿಬಿರ ರದ್ದುಗೊಳಿಸಲು ಪಟ್ಟು ಹಿಡಿದರೂ ಬಳಿಕ ವಿಶೇಷ ಚೇತನರು ಹಿರಿಯ ನಾಗರೀಕರ ಅನುಕೂಲದ ಹಿನ್ನಲೆ ನಡೆಸಲು ಸಮ್ಮತಿಸಿದರು.
ವಿಶೇಚ ಚೇತನರನ್ನ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಇಲಾಖಾ ಸಿಬ್ಬಂಧಿಗಳ ಬಗ್ಗೆ ಆಕ್ರೋಷ ವ್ಯಕ್ತವಾಯಿತು.ಒಟ್ಟಾರೆ ಅವ್ಯವಸ್ಥೆಯಲ್ಲೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ತಪಾಸಣೆಗೆ ಒಳಗಾದರು…
Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *