ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು.
ತಾಲೂಕಿನ ಶಾಸಕ ಅ
ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಎಚ್.ಡಿ.ಕೋಟೆ ತಾಲೋಕಿನ 26ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಶೇಷ ಚೇತನರು ರುತ್ತು ಹಿರಿಯ ನಾಗರಿಕರಿಗಾಗಿ ಶಿಬಿರ ಅಯೋಜಿಸಲಾಗಿತ್ತು.
ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಕಾರ್ಯಕ್ರಮವೂ ಶಿಬಿರದ ಒಂದು ಭಾಗವಾಗಿತ್ತು.ಹೆಚ್.ಡಿ.ಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ
ಆಯೋಜಿಸಲಾಗಿತ್ತು.ಆದ್ರೆ ಸೌಲಭ್ಯ ಒದಗಿಸದೆ ಅಧಿಕಾರಿಗಳು ಆಕ್ರೋಷಕ್ಕೆ ತುತ್ತಾದರು.
ಇಕ್ಕಟ್ಟಾದ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ, ಸಮರ್ಪಕ ಆಸನಗಳ ವ್ಯವಸ್ಥೆ ಇರಲಿಲ್ಲ.
ಆಸನಗಳಿಲ್ಲದೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ನೆಲದಲ್ಲೇ ಕುಳಿತರು.ಇದೇ ವೇಳೆ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ಅವ್ಯವಸ್ಥೆ ಕಂಡು ಕಿಡಿ ಕಾರಿದರು.ಜಿಲ್ಲಾ ವಿಶೇಷ ಚೇತನರ ಇಲಾಖೆ ಉಪನಿರ್ದೇಶಕಿ ಮಾಲೀನಿ ಸೇರಿದಂತೆ ತಾಲೋಕು ಅಧಿಕಾರಿಗಳಿಗೆ ಶಾಸಕ ಚಳಿ ಬಿಡಿಸಿದರು. ಶಿಬಿರ ರದ್ದುಗೊಳಿಸಲು ಪಟ್ಟು ಹಿಡಿದರೂ ಬಳಿಕ ವಿಶೇಷ ಚೇತನರು ಹಿರಿಯ ನಾಗರೀಕರ ಅನುಕೂಲದ ಹಿನ್ನಲೆ ನಡೆಸಲು ಸಮ್ಮತಿಸಿದರು.
ವಿಶೇಚ ಚೇತನರನ್ನ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಇಲಾಖಾ ಸಿಬ್ಬಂಧಿಗಳ ಬಗ್ಗೆ ಆಕ್ರೋಷ ವ್ಯಕ್ತವಾಯಿತು.ಒಟ್ಟಾರೆ ಅವ್ಯವಸ್ಥೆಯಲ್ಲೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ತಪಾಸಣೆಗೆ ಒಳಗಾದರು…
Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *