ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು.
ತಾಲೂಕಿನ ಶಾಸಕ ಅ
ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಎಚ್.ಡಿ.ಕೋಟೆ ತಾಲೋಕಿನ 26ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಶೇಷ ಚೇತನರು ರುತ್ತು ಹಿರಿಯ ನಾಗರಿಕರಿಗಾಗಿ ಶಿಬಿರ ಅಯೋಜಿಸಲಾಗಿತ್ತು.
ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಕಾರ್ಯಕ್ರಮವೂ ಶಿಬಿರದ ಒಂದು ಭಾಗವಾಗಿತ್ತು.ಹೆಚ್.ಡಿ.ಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ
ಆಯೋಜಿಸಲಾಗಿತ್ತು.ಆದ್ರೆ ಸೌಲಭ್ಯ ಒದಗಿಸದೆ ಅಧಿಕಾರಿಗಳು ಆಕ್ರೋಷಕ್ಕೆ ತುತ್ತಾದರು.
ಇಕ್ಕಟ್ಟಾದ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ, ಸಮರ್ಪಕ ಆಸನಗಳ ವ್ಯವಸ್ಥೆ ಇರಲಿಲ್ಲ.
ಆಸನಗಳಿಲ್ಲದೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ನೆಲದಲ್ಲೇ ಕುಳಿತರು.ಇದೇ ವೇಳೆ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ಅವ್ಯವಸ್ಥೆ ಕಂಡು ಕಿಡಿ ಕಾರಿದರು.ಜಿಲ್ಲಾ ವಿಶೇಷ ಚೇತನರ ಇಲಾಖೆ ಉಪನಿರ್ದೇಶಕಿ ಮಾಲೀನಿ ಸೇರಿದಂತೆ ತಾಲೋಕು ಅಧಿಕಾರಿಗಳಿಗೆ ಶಾಸಕ ಚಳಿ ಬಿಡಿಸಿದರು. ಶಿಬಿರ ರದ್ದುಗೊಳಿಸಲು ಪಟ್ಟು ಹಿಡಿದರೂ ಬಳಿಕ ವಿಶೇಷ ಚೇತನರು ಹಿರಿಯ ನಾಗರೀಕರ ಅನುಕೂಲದ ಹಿನ್ನಲೆ ನಡೆಸಲು ಸಮ್ಮತಿಸಿದರು.
ವಿಶೇಚ ಚೇತನರನ್ನ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಇಲಾಖಾ ಸಿಬ್ಬಂಧಿಗಳ ಬಗ್ಗೆ ಆಕ್ರೋಷ ವ್ಯಕ್ತವಾಯಿತು.ಒಟ್ಟಾರೆ ಅವ್ಯವಸ್ಥೆಯಲ್ಲೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ತಪಾಸಣೆಗೆ ಒಳಗಾದರು…
Spread the love

Related post

ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ…

ಮೈಸೂರು,ಏ19,Tv10 ಕನ್ನಡ ಮೈಸೂರಿನ ವಾರ್ಡ್ ನಂ 23 ರ ದೇವರಾಜ ಮಾರುಕಟ್ಟೆ,ಡಿ.ದೇವರಾಜ ಅರಸ್ ರಸ್ತೆ,ಸಯ್ಯಾಜಿರಾವ್ ರಸ್ತೆ,ಕೆ.ಟಿ.ಸ್ಡ್ರೀಟ್,ಶ್ರೀರಾಂಪೇಟೆಯಲ್ಲಿ ಬಿಜೆಪಿ ಮುಖಂಡರು ಯದುವೀರ್ ಪರ ಮತಯಾಚಿಸಿದರು.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನ ಹಂಚಿ…
ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಮೈಸೂರು,ಏ19,Tv10 ಕನ್ನಡ ಲೋಕಸಭೆ ಚುನಾವಣೆ ಕಾವು ಏರುತ್ತಿದೆ.ಅಭ್ಯರ್ಥಿಗಳು ಮತಬೇಟೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ನೆಚ್ಚಿನ ಅಭ್ಯರ್ಥಿಗಳ ಪರ ಅಭಿಮಾನಿಗಳು ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇಂದು ಅಗ್ರಹಾರ 50 ನೇ ವಾರ್ಡ್ ನಲ್ಲಿ…
ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು,ಏ18,Tv10 ಕನ್ನಡ ಮೈಸೂರಿನಲ್ಲಿ ನಕಲಿ ಫೆವಿಕ್ವಿಕ್ ಮಾರಾಟ ಮಾಡುತ್ತಿದ್ದ ಏಜೆನ್ಸಿ ಮೇಲೆ ದೇವರಾಜ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ ನಕಲಿ ಫೆವಿಕ್ವಿಕ್ ಗಳು ದೊರೆತಿದ್ದು ಏಜೆನ್ಸಿಯ ಮಾಲೀಕನನ್ನ…

Leave a Reply

Your email address will not be published. Required fields are marked *