ಮುರಿದುಬಿದ್ದ ರಸ್ತೆ ಫಲಕಗಳು… ತಿರುಗಿ ನೋಡದ ಅಧಿಕಾರಿಗಳು..

 

ಮೈಸೂರು,ಜುಲೈ26,Tv10 ಕನ್ನಡ
ರಸ್ತೆಗಳ ಹೆಸರನ್ನ ಸೂಚಿಸಿ ಸಾರ್ವಜನಿಕರಿಗೆ ನೆರವಾಗಬೇಕಿದ್ದ ಮಾರ್ಗ ಫಲಕಗಳು ಮುರಿದು ಬಿದ್ದಿವೆ.ಪಾಲಿಕೆ ಅಧಿಕಾರಿಗಳಿಗೆ ಫಲಕಗಳು ಗುಣಮಟ್ಟವನ್ನ ಪ್ರಶ್ನಿಸುವಂತಾಗಿದೆ.ಮುರಿದು ಬಿದ್ದು ಮೂಲೆ ಸೇರಿದ್ದರೂ ಯಾವ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಅಳವಡಿಸಲಾದ ಫಲಕಗಳ ದುಃಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಮೂಕಸಾಕ್ಷಿಯಾಗಿ ನಿಂತಿವೆ.

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲೂ ಮಾರ್ಗಗಳನ್ನ ತಿಳಿಸುವ ಸಲುವಾಗಿ ಲಕ್ಷಾಂತರ ವೆಚ್ಚ ಮಾಡಿ ಫಲಕಗಳನ್ನ ಅಳವಡಿಸಲಾಗಿದೆ.ಪಡುವಾರಹಳ್ಳಿ ವಾರ್ಡ್ ನಂ 22 ರ 3 ನೇ ಅಡ್ಡರಸ್ತೆ ಸೂಚಿಸುವ ಮಾರ್ಗ ಫಲಕ ಮುರಿದುಬಿದ್ದು ದಿನಗಳೇ ಉರುಳಿದೆ.ಪಾಲಿಕೆ ಸದಸ್ಯೆ ನಮ್ರತಾ ರಮೇಶ್ ಗೆ ಸೇರುವ ವಾರ್ಡ್ ನಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.ಫಲಕ ಮುರಿದು ಬಿದ್ದು ದಿನಗಳೇ ಉರುಳಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಇಂತಹ ಕಾರ್ಯಕ್ಕೆ ಮುಂದಾಗುವ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸಬೇಕಿರುತ್ತದೆ.ಇದೆಲ್ಲವನ್ನೂ ಗಾಳಿಗೆ ತೂರಿದ ಅಧಿಕಾರಿಗಳ ನಿರ್ಲಕ್ಷ್ಯತೆ ಬಗ್ಗೆ ಏನೆನ್ನಬೇಕು…?

Spread the love

Related post

ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ರಕ್ಷಿತ್ ಕೆ.ಆರ್ ನೇಮಕ

ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ರಕ್ಷಿತ್ ಕೆ.ಆರ್ ನೇಮಕ

ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ರಕ್ಷಿತ್ ಕೆ.ಆರ್ ನೇಮಕ ಬೆಂಗಳೂರು, ಜೂನ್ 9: ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಮಹತ್ವದ ಆದೇಶ ಹೊರಡಿಸಿ, ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA)ದಲ್ಲಿ ವಿಶೇಷ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *