ಮುರಿದುಬಿದ್ದ ರಸ್ತೆ ಫಲಕಗಳು… ತಿರುಗಿ ನೋಡದ ಅಧಿಕಾರಿಗಳು..

 

ಮೈಸೂರು,ಜುಲೈ26,Tv10 ಕನ್ನಡ
ರಸ್ತೆಗಳ ಹೆಸರನ್ನ ಸೂಚಿಸಿ ಸಾರ್ವಜನಿಕರಿಗೆ ನೆರವಾಗಬೇಕಿದ್ದ ಮಾರ್ಗ ಫಲಕಗಳು ಮುರಿದು ಬಿದ್ದಿವೆ.ಪಾಲಿಕೆ ಅಧಿಕಾರಿಗಳಿಗೆ ಫಲಕಗಳು ಗುಣಮಟ್ಟವನ್ನ ಪ್ರಶ್ನಿಸುವಂತಾಗಿದೆ.ಮುರಿದು ಬಿದ್ದು ಮೂಲೆ ಸೇರಿದ್ದರೂ ಯಾವ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಅಳವಡಿಸಲಾದ ಫಲಕಗಳ ದುಃಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಮೂಕಸಾಕ್ಷಿಯಾಗಿ ನಿಂತಿವೆ.

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲೂ ಮಾರ್ಗಗಳನ್ನ ತಿಳಿಸುವ ಸಲುವಾಗಿ ಲಕ್ಷಾಂತರ ವೆಚ್ಚ ಮಾಡಿ ಫಲಕಗಳನ್ನ ಅಳವಡಿಸಲಾಗಿದೆ.ಪಡುವಾರಹಳ್ಳಿ ವಾರ್ಡ್ ನಂ 22 ರ 3 ನೇ ಅಡ್ಡರಸ್ತೆ ಸೂಚಿಸುವ ಮಾರ್ಗ ಫಲಕ ಮುರಿದುಬಿದ್ದು ದಿನಗಳೇ ಉರುಳಿದೆ.ಪಾಲಿಕೆ ಸದಸ್ಯೆ ನಮ್ರತಾ ರಮೇಶ್ ಗೆ ಸೇರುವ ವಾರ್ಡ್ ನಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.ಫಲಕ ಮುರಿದು ಬಿದ್ದು ದಿನಗಳೇ ಉರುಳಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಇಂತಹ ಕಾರ್ಯಕ್ಕೆ ಮುಂದಾಗುವ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸಬೇಕಿರುತ್ತದೆ.ಇದೆಲ್ಲವನ್ನೂ ಗಾಳಿಗೆ ತೂರಿದ ಅಧಿಕಾರಿಗಳ ನಿರ್ಲಕ್ಷ್ಯತೆ ಬಗ್ಗೆ ಏನೆನ್ನಬೇಕು…?

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *