ಪತ್ರಕರ್ತನ ಪುತ್ರಿಯ ಸಾಮಾಜಿಕ ಕಳಕಳಿ…ಕ್ಯಾನ್ಸರ್ ರೋಗಿಗಳಿಗೆ ಕೂದಲು ಡೊನೇಟ್ ಮಾಡಿದ ನಯನಪ್ರಿಯ…

ಪತ್ರಕರ್ತನ ಪುತ್ರಿಯ ಸಾಮಾಜಿಕ ಕಳಕಳಿ…ಕ್ಯಾನ್ಸರ್ ರೋಗಿಗಳಿಗೆ ಕೂದಲು ಡೊನೇಟ್ ಮಾಡಿದ ನಯನಪ್ರಿಯ…

ಮೈಸೂರು,ಜುಲೈ28,Tv10 ಕನ್ನಡ
ಮೈಸೂರಿನ ಹಿರಿಯ ಪತ್ರಕರ್ತರೊಬ್ಬರ ಪುತ್ರಿ ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ಕೂದಲನ್ನ ಡೊನೇಟ್ ಮಾಡಿ ಸಾಮಾಜಿಕ ಕಳಕಳಿ ಪ್ರದರ್ಶಿಸಿದ್ದಾರೆ.

ವರ್ಷಗಳ ಕಾಲ ಸೊಂಪಾಗಿ ಬೆಳೆದ ಸುಮಾರು 35 cm ಉದ್ದದ ಕೂದಲನ್ನ ಕಟ್ ಮಾಡಿಸಿ ಕ್ಯಾನ್ಸರ್ ರೋಗಿಗಳ ನೆರವಿಗಾಗಿ ನೀಡಿದ್ದಾರೆ.ಮೈಸೂರು ಮಿತ್ರ ಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿರುವ ಎ.ಸಿ.ಪ್ರಭಾಕರ್ (ಎಸಿಪಿ) ರವರ ಪುತ್ರಿ ನಯನಪ್ರಿಯಾ ತಮ್ಮ ಕೂದಲನ್ನ ದಾನ ಮಾಡಿದವರು.ಕ್ಯಾನ್ಸರ್ ರೋಗಿಗಳಿಗೆ ಈವಕೂದಲನ್ನ ಬಳಸಬೇಕಿದ್ದಲ್ಲಿ ಕನಿಷ್ಟ 14 ಇಂಚು ಉದ್ದದ ಕೂದಲನ್ನ ಡೊನೇಟ್ ಮಾಡಬೇಕೆಂಬ ನಿಯಮವಿದೆ.ಇದಕ್ಕಾಗಿ ನಯನಪ್ರಿಯಾ ನಿಯಮಾವಳಿಯನ್ನ ಸಮಗ್ರವಾಗಿ ಅರಿತುಕೊಂಡು.ಅವಶ್ಯಕತೆ ಇರುವ ಅಳತೆಯ ಕೂದಲನ್ನ ಕಟ್ ಮಾಡಿಸಿ ಬೆಂಗಳೂರಿನಲ್ಲಿರುವ ಇಂಡಿಯಾ ಕ್ಯಾನ್ಸರ್ ಸೊಸೈಟಿ ಸಂಸ್ಥೆಗೆ ರವಾನಿಸಿದ್ದಾರೆ.ಕೂದಲನ್ನ ಕ್ಯಾನ್ಸರ್ ರೋಗಿಗಳಿಗೆ ಡೊನೇಟ್ ಮಾಡುವುದು ಸುಲಭದ ಮಾತಲ್ಲ.ಕೂದಲು ನ್ಯಾಚುರಲ್ ಆಗಿರಬೇಕು,ಯಾವುದೇ ಕೃತಕ ಬಣ್ಣಗಳನ್ನ ಹಚ್ಚಿರಬಾರದು,ಆರೋಗ್ಯವಾಗಿ ಕೂದಲನ್ನ ಕಾಪಾಡಿರಬೇಕು,ಜಡೆ ಹಣೆದ ರೂಪದಲ್ಲೇ ಕಟ್ ಮಾಡಿಸಬೇಕು,ನಂತರ ಇಂಡಿಯಾ ಕ್ಯಾನ್ಸರ್ ಸೊಸೈಟಿ ಸಂಸ್ಥೆಯ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಹಾಕಬೇಕು,ನಂತರ ಅವರು ನೀಡುವ ಫಾರಂ ನಲ್ಲಿ ತಮ್ಮ ವಿವರವನ್ನ ನೀಡಬೇಕು ಇಷ್ಟೆಲ್ಲಾ ನಿಯಮಗಳನ್ನ ಪಾಲಿಸಿದ ನಯನಪ್ರಿಯ ಕ್ಯಾನ್ಸರ್ ರೋಗಿಗಳ ನೆರವಿಗೆ ಧಾವಿಸಿದ್ದಾರೆ.

ತಂದೆಯಂತೆಯೇ ಮಗಳು ಎಂಬ ಹೆಗ್ಗಳಿಕೆಗೆ ನಯನಪ್ರಿಯ ಭಾಜನರಾಗಿದ್ದಾರೆ.ದಂತಚೋರ ವೀರಪ್ಪನ್ ಸೆರೆ ಕಾರ್ಯಾಚರಣೆಯಲ್ಲಿ ನೀಡಿದ ಕೊಡುಗೆಯನ್ನ ಸರ್ಕಾರ ಗುರುತಿಸಿ ಗೌರವಕ್ಕೆ ಪಾತ್ರರಾದ ಎ.ಸಿ.ಪ್ರಭಾಕರ್ ಪುತ್ರಿ ನಯನಪ್ರಿಯಾ ಇಂಜಿನಿಯರಿಂಗ್ ಸ್ಟೂಡೆಂಟ್.ಬೆಂಗಳೂರಿನ ದಯಾನಂದಸಾಗರ್ ಕಾಲೇಜು ವಿಧ್ಯಾರ್ಥಿಯಾಗಿರುವ ನಯನಪ್ರಿಯ ಎನ್.ಜಿ.ಓ.ಸಂಸ್ಥೆಯೊಂದರ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.ಇದೀಗ ಕ್ಯಾನ್ಸರ್ ರೋಗಿಗಳ ನೆರವಿಗೆ ಬಂದ ನಯನಪ್ರಿಯ ಇತರರಿಗೂ ಮಾದರಿಯಾಗಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *