ಡಿಡಿಎಲ್ ಆರ್ ಸರ್ವೆಯರ್ ಎಸಿಬಿ ಬಲೆಗೆ…ಜಮೀನು ಪೋಡಿ ಮಾಡಿಕೊಡಲು 35 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲಾಕ್…

ಡಿಡಿಎಲ್ ಆರ್ ಸರ್ವೆಯರ್ ಎಸಿಬಿ ಬಲೆಗೆ…ಜಮೀನು ಪೋಡಿ ಮಾಡಿಕೊಡಲು 35 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲಾಕ್…

ಮೈಸೂರು,ಜುಲೈ30,Tv10 ಕನ್ನಡ
ಜಮೀನಿಗೆ ಸಂಭಂಧಪಟ್ಟಂತೆ ಹಳೇ ಪೋಡಿ ರದ್ದುಪಡಿಸಿ ಅನುಭವದಲ್ಲಿರುವ ಪೋಡಿ ಮಾಡಿಕೊಡಲು ರೈತರೊಬ್ಬರ ಬಳಿ 35 ಸಾವಿರ ಲಂಚ ಪಡೆಯುತ್ತಿದ್ದ ಡಿಡಿಎಲ್ ಆರ್ ಸರ್ವೆಯರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.35 ಸಾವಿರ ಲಂಚ ಪಡೆಯವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸರ್ವೆಯರ್ ಮಂಜುನಾಥ್ ರನ್ನ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಪಿರಿಯಾಪಟ್ಟಣದ ರಾವಂದೂರು ಗ್ರಾಮದ ರೈತರೊಬ್ಬರು ತಮ್ಮ ಜಮೀನಿಗೆ ಹೊಸ ಪೋಡಿ ಮಾಡಲು ಜಿಲ್ಲಾಧಿಕಾರಿಗಳ ಕಚೇರಿ ತಾಂತ್ರಿಕ ಸಹಾಯಕರು ಪದನಿಮಿತ್ತ ಉಪನಿರ್ದೇಶಕ ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಿದ್ದರು.ಪೋಡಿ ಕೆಲಸ ಮಾಡಲು ಸರ್ವೆಯರ್ ಮಂಜುನಾಥ್ 35 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇದರಿಂದ ಬೇಸತ್ತ ರೈತರು ಮೈಸೂರು ಎಸಿಬಿ ಠಾಣೆಗೆ ದೂರು ನೀಡಿದ್ದರು.ಭ್ರಷ್ಟ ಸರ್ವೆಯರ್ ನ ರೆಡ್ ಹ್ಯಾಂಡಾಗಿ ಹಿಡಿಯಲು ಮೈಸೂರು ಎಸಿಬಿ ಟ್ರಾಪ್ ಸಿದ್ದಪಡಿಸಿತ್ತು.ಎಸ್ಪಿ ಸಜೀತ್ ವಿ.ಜೆ.ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಧರ್ಮೇಂದ್ರ ರವರ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ಸರ್ವೆಯರ್ ಮಂಜುನಾಥ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರು-ಬನ್ನೂರು ರಸ್ತೆಯ ಡಿ.ಎಫ್.ಆರ್.ಎಲ್ ಬಳಿ ಹಣ ಪಡೆಯುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಬಂಧಿಸಿದ್ದಾರೆ.ಆರೋಪಿ ಮಂಜುನಾಥ್ ವಿರುದ್ದ ಕ್ರಮ ಕೈಗೊಳ್ಳಲು ಎಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *