ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಟಿ.ನರಸೀಪುರ,ಜುಲೈ30,Tv10 ಕನ್ನಡ
ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ ಸರಗಳ್ಳತನದಲ್ಲೂ ತಗಲಾಕಿಕೊಂಡ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸೆರೆಯಾಗಿದ್ದು ಬಂಧಿತರಿಂದ 40 ಗ್ರಾಂ ಚಿನ್ನದ ಸರ,13.500/- ರೂ ನಗದು ವಶಪಡಿಸಿಕೊಳ್ಳಲಾಗಿದೆ.

ಟಿ.ನರಸೀಪುರದ ಬಂಡಿಬೀದಿಯ ಅಂಗಡಿಯೊಂದರ ಷಟರ್ ಎತ್ತಿ 16 ಸಾವಿರ ಕ್ಯಾಶ್ ಕಳುವು ಮಾಡಿದ್ದ ಪ್ರಕರಣವನ್ನ ಟಿ.ನರಸೀಪುರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದರು.ಎಸ್ಪಿ ಆರ್.ಚೇತನ್,ಅಡಿಷನಲ್ ಎಸ್ಪಿ ಡಾ.ಮಾಲಿನಿ,ಡಿವೈಎಸ್ಪಿ ಗೋವಿಂದರಾಜು,ಪಿಐ ಕೃಷ್ಣಪ್ಪ ರವರ ಮಾರ್ಗದರ್ಶನದಲ್ಲಿ ಟಿ.ನರಸೀಪುರ ಪಿಎಸ್ಸೈ ಮಹೇಶ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡು ಆರೋಪಿಯನ್ನ ಬಂಧಿಸಿದ್ದರು.ಆರೋಪಿಯ ವಿಚಾರಣೆ ವೇಳೆ ಆದಿಬೆಟ್ಟದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ 55 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣದಲ್ಲೂ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.ಈ ಕೃತ್ಯದಲ್ಲಿ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ನಡೆಸಿದ್ದ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ…

Spread the love

Related post

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ…

ಮೈಸೂರು,ಏ24,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ವೃದ್ದೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಚಾಮರಾಜನಗರ ನಿವಾಸಿ ರಂಗಸ್ವಾಮಿ ಸಿಕ್ಕಿಬಿದ್ದ ಸರಗಳ್ಳ.ಬಂಧಿತನಿಂದ 3.30 ಲಕ್ಷ…
ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ…

ಮೈಸೂರು,ಏ23,Tv10 ಕನ್ನಡ ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ…
ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು,ಏ23,Tv10 ಕನ್ನಡ ಹುಲಿದಾಳಿಗೆ ಹಸು ಬಲಿಯಾದ ಘಟನೆ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ.ಮನೋಹರ್ ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ.ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಇಲ್ಲವೆಂದು ಕಿಕ್ಕೇರಿಕಟ್ಟೆ ಗ್ರಾಮಸ್ಥರು…

Leave a Reply

Your email address will not be published. Required fields are marked *