ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಟಿ.ನರಸೀಪುರ,ಜುಲೈ30,Tv10 ಕನ್ನಡ
ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ ಸರಗಳ್ಳತನದಲ್ಲೂ ತಗಲಾಕಿಕೊಂಡ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸೆರೆಯಾಗಿದ್ದು ಬಂಧಿತರಿಂದ 40 ಗ್ರಾಂ ಚಿನ್ನದ ಸರ,13.500/- ರೂ ನಗದು ವಶಪಡಿಸಿಕೊಳ್ಳಲಾಗಿದೆ.

ಟಿ.ನರಸೀಪುರದ ಬಂಡಿಬೀದಿಯ ಅಂಗಡಿಯೊಂದರ ಷಟರ್ ಎತ್ತಿ 16 ಸಾವಿರ ಕ್ಯಾಶ್ ಕಳುವು ಮಾಡಿದ್ದ ಪ್ರಕರಣವನ್ನ ಟಿ.ನರಸೀಪುರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದರು.ಎಸ್ಪಿ ಆರ್.ಚೇತನ್,ಅಡಿಷನಲ್ ಎಸ್ಪಿ ಡಾ.ಮಾಲಿನಿ,ಡಿವೈಎಸ್ಪಿ ಗೋವಿಂದರಾಜು,ಪಿಐ ಕೃಷ್ಣಪ್ಪ ರವರ ಮಾರ್ಗದರ್ಶನದಲ್ಲಿ ಟಿ.ನರಸೀಪುರ ಪಿಎಸ್ಸೈ ಮಹೇಶ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡು ಆರೋಪಿಯನ್ನ ಬಂಧಿಸಿದ್ದರು.ಆರೋಪಿಯ ವಿಚಾರಣೆ ವೇಳೆ ಆದಿಬೆಟ್ಟದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ 55 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣದಲ್ಲೂ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.ಈ ಕೃತ್ಯದಲ್ಲಿ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ನಡೆಸಿದ್ದ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *