ನ್ಯಾಯಾಲಯದ ಬಳಿ ಲಂಚ ಪಡೆದ ಮುಖ್ಯಪೇದೆ ACB ಬಲೆಗೆ…ವಾರೆಂಟ್ ಜಾರಿಗಾಗಿ ಡಿಮ್ಯಾಂಡ್ ಮಾಡಿದ ಖಾಕಿ…

ನ್ಯಾಯಾಲಯದ ಬಳಿ ಲಂಚ ಪಡೆದ ಮುಖ್ಯಪೇದೆ ACB ಬಲೆಗೆ…ವಾರೆಂಟ್ ಜಾರಿಗಾಗಿ ಡಿಮ್ಯಾಂಡ್ ಮಾಡಿದ ಖಾಕಿ…

ಮಂಡ್ಯ,ಆಗಸ್ಟ್2,Tv10 ಕನ್ನಡ
ಚೆಕ್ ಬೌನ್ಸ್ ಪ್ರಕರಣದ ಆರೋಪಿಗೆ ವಾರೆಂಟ್ ಜಾರಿ ಮಾಡಲು ಲಂಚ ಪಡೆದ ಹೆಡ್ ಕಾನ್ಸ್ ಟೇಬಲ್ ಎಸಿಬಿ ಬಲೆಗೆ ಬಿದ್ದಿದ್ದಾರೆ.ನ್ಯಾಯಾಲಯದ ಬಳಿಯೇ ಲಂಚ ಪಡೆದ ಮುಖ್ಯಪೇದೆ ಇದೀಗ ಎಸಿಬಿ ಪೊಲೀಸರ ಅತಿಥಿ.ಮದ್ದೂರು ಟೌನ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶ್ರೀಕಾಂತ್ ಎಸಿಬಿ ಬಲೆಗೆ ಬಿದ್ದವರು.ಚೆಕ್ ಬೌನ್ಸ್ ಕೇಸ್ ನಲ್ಲಿ ಬೋರೇಗೌಡ ಎಂಬುವರಿಗೆ ವಾರೆಂಟ್ ಆಗಿತ್ತು.ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.ವಾರೆಂಟ್ ಕಾರ್ಯಗೊಳಿಸಲು ಪಿರ್ಯಾದುದಾರರಿಂದ ಶ್ರೀಕಾಂತ್ 2 ಸಾವಿರ ಬೇಡಿಕೆ ಇಟ್ಟು ಒತ್ತಾಯಿಸಿದ್ದರು.ಇದರಿಂದ ಬೇಸತ್ತ ಪಿರ್ಯಾದುದಾರರು ಮಂಡ್ಯ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಎಸ್ಪಿ ವಿ.ಜೆ.ಸಜೀತ್ ರವರ ಮಾರ್ಗದರ್ಶನದಲ್ಲಿ ಮಂಡ್ಯ ಎಸಿಬಿ ಪೊಲೀಸರು ದಾಳಿ ನಡೆಸಿದ್ದು ನ್ಯಾಯಾಲಯದ ಬಳಿ 1500/-ರೂ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಆರೋಪಿ ಶ್ರೀಕಾಂತ್ ರನ್ನ ಬಂಧಿಸಿರುವ ಎಸಿಬಿ ಪೊಲೀಸರು ಲಂಚದ ಹಣ ವಶಪಡಿಸಿಕೊಂಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *