ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್…

ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್…

ನಂಜನಗೂಡು,ಆಗಸ್ಟ್2,Tv10 ಕನ್ನಡ
ಕೊನೆಗೂ ಅರಣ್ಯಾಧಿಕಾರಿಗಳು ನರಭಕ್ಷಕ ವ್ಯಾಘ್ರನ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.ದನಗಾಹಿಯನ್ನ ಬಲಿ ಪಡೆದ ನರಭಕ್ಷಕನ ಸೆರೆ ಹಿಡಿಯಲು ಮುಂದಾಗದ ಅರಣ್ಯಾಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದ ಹಾದನೂರು ಒಡೆಯನಪುರ ಗ್ರಾಮಸ್ಥರಿಗೆ ಸ್ಪಂದಿಸಿದ್ದಾರೆ.ಹಾದನೂರು ಒಡೆಯನಪುರ,ನಂಜದೇವರಬೆಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಕಾರ್ಯಾಚರಣೆ ನಡೆಯಲಿದೆ.ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಕೂಂಬಿಂಗ್ ಆಪರೇಷನ್ ಆರಂಭವಾಗಿದೆ.ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.ದಸರಾದಲ್ಲಿ ಭಾಗವಹಿಸುವ ನಾಲ್ಕು ಆನೆಗಳನ್ನ ಆಪರೇಷನ್ ಟೈಗರ್ ಗೆ ಬಳಸಿಕೊಂಡಿದ್ದಾರೆ.ಹುಲಿಹೆಜ್ಜೆ ಗುರುತುಗಳ ಜಾಡನ್ನ ಹಿಡಿದು ಕಾರ್ಯಾಚರಣೆ ನಡೆಸಲಾಗುತ್ತಿದೆ.ಕೆಲವೆಡೆ ಸಿಸಿ ಕ್ಯಾಮರಾಗಳನ್ನ ಅಳವಡಿಸಲಾಗಿದೆ.ದನಗಾಹಿ ಪುಟ್ಟಸ್ವಾಮಿ ಗೌಡ ರನ್ನ ಬಲಿ ಪಡೆದ ಜಮೀನಿನ ಬಳಿ ಬೋನು ಇರಿಸಿದ್ದ ಅರಣ್ಯಾಧಿಕಾರಿಗಳು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿರಲಿಲ್ಲ.ಹೀಗಾಗಿ ಗ್ರಾಮಸ್ಥರು ಭಯದ ವಾತಾವರಣದಲ್ಲಿದ್ದರು.ಮನೆಯಂದ ಹೊರಬರಲು ಹೆದರುತ್ತಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿ ಗ್ರಾಮಸ್ಥರ ಆತಂಕವನ್ನ ಸುದ್ದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಅರಣ್ಯಾಧಿಕಾರಿಗಳು ಆಪರೇಷನ್ ಟೈಗರ್ ಆರಂಭಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *