ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್…

ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್…

ನಂಜನಗೂಡು,ಆಗಸ್ಟ್2,Tv10 ಕನ್ನಡ
ಕೊನೆಗೂ ಅರಣ್ಯಾಧಿಕಾರಿಗಳು ನರಭಕ್ಷಕ ವ್ಯಾಘ್ರನ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.ದನಗಾಹಿಯನ್ನ ಬಲಿ ಪಡೆದ ನರಭಕ್ಷಕನ ಸೆರೆ ಹಿಡಿಯಲು ಮುಂದಾಗದ ಅರಣ್ಯಾಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದ ಹಾದನೂರು ಒಡೆಯನಪುರ ಗ್ರಾಮಸ್ಥರಿಗೆ ಸ್ಪಂದಿಸಿದ್ದಾರೆ.ಹಾದನೂರು ಒಡೆಯನಪುರ,ನಂಜದೇವರಬೆಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಕಾರ್ಯಾಚರಣೆ ನಡೆಯಲಿದೆ.ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಕೂಂಬಿಂಗ್ ಆಪರೇಷನ್ ಆರಂಭವಾಗಿದೆ.ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.ದಸರಾದಲ್ಲಿ ಭಾಗವಹಿಸುವ ನಾಲ್ಕು ಆನೆಗಳನ್ನ ಆಪರೇಷನ್ ಟೈಗರ್ ಗೆ ಬಳಸಿಕೊಂಡಿದ್ದಾರೆ.ಹುಲಿಹೆಜ್ಜೆ ಗುರುತುಗಳ ಜಾಡನ್ನ ಹಿಡಿದು ಕಾರ್ಯಾಚರಣೆ ನಡೆಸಲಾಗುತ್ತಿದೆ.ಕೆಲವೆಡೆ ಸಿಸಿ ಕ್ಯಾಮರಾಗಳನ್ನ ಅಳವಡಿಸಲಾಗಿದೆ.ದನಗಾಹಿ ಪುಟ್ಟಸ್ವಾಮಿ ಗೌಡ ರನ್ನ ಬಲಿ ಪಡೆದ ಜಮೀನಿನ ಬಳಿ ಬೋನು ಇರಿಸಿದ್ದ ಅರಣ್ಯಾಧಿಕಾರಿಗಳು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿರಲಿಲ್ಲ.ಹೀಗಾಗಿ ಗ್ರಾಮಸ್ಥರು ಭಯದ ವಾತಾವರಣದಲ್ಲಿದ್ದರು.ಮನೆಯಂದ ಹೊರಬರಲು ಹೆದರುತ್ತಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿ ಗ್ರಾಮಸ್ಥರ ಆತಂಕವನ್ನ ಸುದ್ದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಅರಣ್ಯಾಧಿಕಾರಿಗಳು ಆಪರೇಷನ್ ಟೈಗರ್ ಆರಂಭಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *