ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ …

ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ …

ನಂಜನಗೂಡು,ಆಗಸ್ಟ್3,Tv10 ಕನ್ನಡ
ಕೊನೆಗೂ ಹಿಂದಿ ಶಿಕ್ಷಕಿ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ.ನಂಜನಗೂಡು ನಗರಸಭೆ ಕೌನ್ಸಿಲರ್ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.ಶಿಕ್ಷಕಿಯೊಂದಿಗೆ ಪತಿಯ ಅಕ್ರಮ ಸಂಭಂಧಕ್ಕೆ ಬೇಸತ್ತಿದ್ದ ಕೌನ್ಸಿಲರ್ ಸುಫಾರಿ ಕೊಟ್ಟು ಕೊಲೆ ಮಾಡಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.5 ನೇ ವಾರ್ಡಿನಿಂದ ನಗರಸಭೆಗೆ ಆಯ್ಕೆಯಾದ ಕೌನ್ಸಿಲರ್ ಗಾಯಿತ್ರಿ ಮುರುಗೇಶ್,ಭಾಗ್ಯ,ನಾಗಮ್ಮ ಮತ್ತು ಕುಮಾರ್ ಬಂಧಿತರು.ಘಟನೆ ನಡೆದು 6 ತಿಂಗಳ ನಂತರ ಆರೋಪಿಗಳನ್ನ ಬಂಧಿಸಿದ ಪೊಲೀಸರು ನಿಗೂಢ ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮಾರ್ಚ್ 9 ರಂದು ಹಿಂದಿ ಶಿಕ್ಷಕಿ ಸುಲೋಚನಾ ಎಂಬುವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತನಿಖೆ ನಡೆಸಿದ ಪೊಲೀಸರು ಕೊಲೆ ಮೊಕದ್ದಮೆ ದಾಖಲಿಸಿದ್ರು.ಘಟನೆ ನಡೆದು 6 ತಿಂಗಳಾದ್ರೂ ಆರೋಪಿಗಳನ್ನ ಬಂಧಿಸದ ಪೊಲೀಸರ ಮೇಲೆ ತೀವ್ರ ಒತ್ತಡ ಬಂದಿತ್ತು.ಈ ಹಿನ್ನಲೆ ಎಸ್ಪಿ ಆರ್.ಚೇತನ್,ಎಎಸ್ಪಿ ಡಾ.ಮಾಲಿನಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋವಿಂದರಾಜ್ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ ತಳವಾರ್ ಹಾಗೂ ಸಿಬ್ಬಂದಿಗಳು ತನಿಖೆಯನ್ನ ತೀವ್ರಗೊಳಿಸಿದ್ದರು.ತನಿಖೆ ವೇಳೆ ದೊರೆತ ಸುಳಿವಿನ ಆಧಾರದ ಮೇಲೆ ಕೌನ್ಸಿಲರ್ ಗಾಯಿತ್ರಿ ಮುರುಗೇಶ್ ಹಾಗೂ ಸಂಭಂಧಿಕರನ್ನ ಅರೆಸ್ಟ್ ಮಾಡಿದ್ದಾರೆ.ಬಂಧಿತ ಗಾಯಿತ್ರಿ ಪತಿ ಮುರುಗೇಶ್ ಹಾಗೂ ಶಿಕ್ಷಕಿ ಸುಲೋಚನಾ ನಡುವೆ ಅಕ್ರಮ ಸಂಭಂಧ ಇತ್ತೆಂದು ಹೇಳಲಾಗಿದೆ.ಶ್ರೀಕಂಠೇಶ್ವರನ ದೇವಾಲಯದಲ್ಲಿ ಡಿ.ಗ್ರೂಪ್ ನೌಕರನಾಗಿದ್ದ ಮುರುಗೇಶ್ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದ.ಸುಲೋಚನಾ ಜೊತೆ ಅಕ್ರಮ ಸಂಭಂಧ ಇರಿಸಿಕೊಂಡಿದ್ದ.ಈ ವಿಚಾರದಲ್ಲಿ ಮುರುಗೇಶ್ ಮನೆಯಲ್ಲಿ ಸಾಕಷ್ಟು ಬಾರಿ ಗಲಾಟೆ ಆಗಿತ್ತು.ತನ್ನ ಕುಟುಂಬದ ಸಂತೋಷಕ್ಕೆ ಅಡ್ಡಿಯಾದ ಸುಲೋಚನಾಳನ್ನ ಮುಗಿಸಲು ಸ್ಕೆಚ್ ಹಾಕಿದ ಗಾಯಿತ್ರಿ ತನ್ನ ಸಂಭಂಧಿಕರಾದ ಭಾಗ್ಯ,ನಾಗಮ್ಮ ಹಾಗೂ ಕುಮಾರ್ ಜೊತೆ ಸೇರಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.ಘಟನೆ ನಡೆದು 6 ತಿಂಗಳ ನಂತರ ಆರೋಪಿಗಳನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *